ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ 2ಸಾವಿರ ಹೆಚ್ಚುವರಿ ಬಸ್ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಅ 30 ರಿಂದ ನ.1 ರವರೆಗೆ ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಈ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಹೆಚ್ಚುವರಿ ವಾಹನಗಳು ಸಂಚಾರ ಪ್ರಾರಂಭಿಸಲಿವೆ.
ತಮಿಳುನಾಡು ಹಾಗೂ ಕೇರಳ ಕಡೆಗೆ ತೆರಳುವ ಬಸ್ಗಳು ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ. ಪ್ರಯಾಣಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ. ಇದಲ್ಲದೇ ರಾಜ್ಯದ ಮತ್ತು ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 3 ಹಾಗೂ 4 ರಂದು ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗುವುದು. www.ksrtc.karnataka.gov.in ವೆಬ್ಸೈಟ್ ಮುಖಾಂತರ ಇ-ಟಿಕೆಟ್ ಬುಕ್ಕಿಂಗ್ಅನ್ನು ಮಾಡಬಹುದಾಗಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ. ಇದಲ್ಲದೇ ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆ ಕಲ್ಪಿಸಲಾಗುವುದು ಎಂದು ತಿಳಿಸಲಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…