ಗಣೇಶೋತ್ಸವ | ಮೈಸೂರಿನಲ್ಲಿ ಗಮನ ಸೆಳೆದ ವಿಶೇಷ ಗಣಪ | ವಿವಿಧ ಪ್ರತಿಮೆಗಳು |

September 7, 2024
10:38 PM

ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಈ ಗಣಪ ಹಾಗೂ ಇಲ್ಲಿರುವ ಪ್ರತಿಮೆಗಳು ಗಮನ ಸೆಳೆದಿದೆ. ದೇಶ ಹಾಗೂ ರಾಜ್ಯದ ಗಮನಸೆಳೆದ ಮೈಸೂರಿನ ಪ್ರಮುಖರ ಮಣ್ಣಿನ ಆಕೃತಿಯನ್ನು ಗಣಪತಿ ಮೂಲಕ ಪ್ರಸ್ತುತಪಡಿಸುವ ಕಾರ್ಯಕ್ಕೆ ಮೈಸೂರಿನ ಕಲಾವಿದ ರೇವಣ್ಣ ಮುಂದಾಗಿದ್ದಾರೆ. ಇದು ಈ ಬಾರಿಯ ವಿಶೇಷ.

Advertisement
Advertisement
Advertisement
Advertisement

ಈ ಬಾರಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಗಣೇಶನ ಮಣ್ಣಿನ ಆಕೃತಿಯೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಗಮನ ಸೆಳೆದ ಜಿಲ್ಲೆಯ ಪ್ರಮುಖರಾದ ಕಲಾವಿದ ಅರುಣ್ ಯೋಗಿ ರಾಜ್, ಮೇಘಾಲಯ ರಾಜ್ಯಪಾಲ ಹಾಗೂ ಮೈಸೂರಿನವರೇ ಆದ ಸಿ ಹೆಚ್ ವಿಜಯ್ ಶಂಕರ್ ಹಾಗೂ ಮೈಸೂರು ಕೊಡಗು ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಹಾಗೂ ಶ್ರೇಷ್ಠ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಅವರ ಮಣ್ಣಿನಾಕೃತಿ ರಚಿಸುವ ಮೂಲಕ ಕಲಾವಿದ ಮೈಸೂರಿನ ಕುಂಬಾರಗೇರಿಯ ಕಲಾವಿದ ರೇವಣ್ಣ ಜನರ ಗಮನ ಸೆಳೆದಿದ್ದಾರೆ.

Advertisement

ಮಣ್ಣಿನಲ್ಲಿ ಪರಿಸರ ಮಾಲಿನ್ಯ ಮುಕ್ತ ಬಗೆ ಬಗೆಯ ಗಣಪತಿಗಳನ್ನು ತಯಾರಿಸುವ ಕಲಾವಿದ ರೇವಣ್ಣ ಈ ಬಾರಿ ಗಣೇಶನ ಮಣ್ಣಿನಾಕೃತಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಣ್ಣಿನ ಆಕೃತಿ ಹಾಗೂ ಅಯೋದ್ಯೆಯಲ್ಲಿ ಶ್ರೀರಾಮ ಲಲ್ಲನ ವಿಗ್ರಹ ಕೆತ್ತಿದ ಮೈಸೂರಿನ ಕಲಾವಿದ ಅರುಣ್ ಯೋಗಿ ರಾಜ್ ಅವರ ಮಣ್ಣಿನ ಆಕೃತಿಯನ್ನು ಗಣೇಶನ ವಿಗ್ರಹದಲ್ಲಿ ಪೂಜೆ ಸಲ್ಲಿಸುವ ಮಾದರಿ ತಯಾರಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror