ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಈ ಗಣಪ ಹಾಗೂ ಇಲ್ಲಿರುವ ಪ್ರತಿಮೆಗಳು ಗಮನ ಸೆಳೆದಿದೆ. ದೇಶ ಹಾಗೂ ರಾಜ್ಯದ ಗಮನಸೆಳೆದ ಮೈಸೂರಿನ ಪ್ರಮುಖರ ಮಣ್ಣಿನ ಆಕೃತಿಯನ್ನು ಗಣಪತಿ ಮೂಲಕ ಪ್ರಸ್ತುತಪಡಿಸುವ ಕಾರ್ಯಕ್ಕೆ ಮೈಸೂರಿನ ಕಲಾವಿದ ರೇವಣ್ಣ ಮುಂದಾಗಿದ್ದಾರೆ. ಇದು ಈ ಬಾರಿಯ ವಿಶೇಷ.
ಈ ಬಾರಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಗಣೇಶನ ಮಣ್ಣಿನ ಆಕೃತಿಯೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಗಮನ ಸೆಳೆದ ಜಿಲ್ಲೆಯ ಪ್ರಮುಖರಾದ ಕಲಾವಿದ ಅರುಣ್ ಯೋಗಿ ರಾಜ್, ಮೇಘಾಲಯ ರಾಜ್ಯಪಾಲ ಹಾಗೂ ಮೈಸೂರಿನವರೇ ಆದ ಸಿ ಹೆಚ್ ವಿಜಯ್ ಶಂಕರ್ ಹಾಗೂ ಮೈಸೂರು ಕೊಡಗು ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಹಾಗೂ ಶ್ರೇಷ್ಠ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಅವರ ಮಣ್ಣಿನಾಕೃತಿ ರಚಿಸುವ ಮೂಲಕ ಕಲಾವಿದ ಮೈಸೂರಿನ ಕುಂಬಾರಗೇರಿಯ ಕಲಾವಿದ ರೇವಣ್ಣ ಜನರ ಗಮನ ಸೆಳೆದಿದ್ದಾರೆ.
ಮಣ್ಣಿನಲ್ಲಿ ಪರಿಸರ ಮಾಲಿನ್ಯ ಮುಕ್ತ ಬಗೆ ಬಗೆಯ ಗಣಪತಿಗಳನ್ನು ತಯಾರಿಸುವ ಕಲಾವಿದ ರೇವಣ್ಣ ಈ ಬಾರಿ ಗಣೇಶನ ಮಣ್ಣಿನಾಕೃತಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಣ್ಣಿನ ಆಕೃತಿ ಹಾಗೂ ಅಯೋದ್ಯೆಯಲ್ಲಿ ಶ್ರೀರಾಮ ಲಲ್ಲನ ವಿಗ್ರಹ ಕೆತ್ತಿದ ಮೈಸೂರಿನ ಕಲಾವಿದ ಅರುಣ್ ಯೋಗಿ ರಾಜ್ ಅವರ ಮಣ್ಣಿನ ಆಕೃತಿಯನ್ನು ಗಣೇಶನ ವಿಗ್ರಹದಲ್ಲಿ ಪೂಜೆ ಸಲ್ಲಿಸುವ ಮಾದರಿ ತಯಾರಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…