ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಈ ಗಣಪ ಹಾಗೂ ಇಲ್ಲಿರುವ ಪ್ರತಿಮೆಗಳು ಗಮನ ಸೆಳೆದಿದೆ. ದೇಶ ಹಾಗೂ ರಾಜ್ಯದ ಗಮನಸೆಳೆದ ಮೈಸೂರಿನ ಪ್ರಮುಖರ ಮಣ್ಣಿನ ಆಕೃತಿಯನ್ನು ಗಣಪತಿ ಮೂಲಕ ಪ್ರಸ್ತುತಪಡಿಸುವ ಕಾರ್ಯಕ್ಕೆ ಮೈಸೂರಿನ ಕಲಾವಿದ ರೇವಣ್ಣ ಮುಂದಾಗಿದ್ದಾರೆ. ಇದು ಈ ಬಾರಿಯ ವಿಶೇಷ.
ಈ ಬಾರಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಗಣೇಶನ ಮಣ್ಣಿನ ಆಕೃತಿಯೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಗಮನ ಸೆಳೆದ ಜಿಲ್ಲೆಯ ಪ್ರಮುಖರಾದ ಕಲಾವಿದ ಅರುಣ್ ಯೋಗಿ ರಾಜ್, ಮೇಘಾಲಯ ರಾಜ್ಯಪಾಲ ಹಾಗೂ ಮೈಸೂರಿನವರೇ ಆದ ಸಿ ಹೆಚ್ ವಿಜಯ್ ಶಂಕರ್ ಹಾಗೂ ಮೈಸೂರು ಕೊಡಗು ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಹಾಗೂ ಶ್ರೇಷ್ಠ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಅವರ ಮಣ್ಣಿನಾಕೃತಿ ರಚಿಸುವ ಮೂಲಕ ಕಲಾವಿದ ಮೈಸೂರಿನ ಕುಂಬಾರಗೇರಿಯ ಕಲಾವಿದ ರೇವಣ್ಣ ಜನರ ಗಮನ ಸೆಳೆದಿದ್ದಾರೆ.
ಮಣ್ಣಿನಲ್ಲಿ ಪರಿಸರ ಮಾಲಿನ್ಯ ಮುಕ್ತ ಬಗೆ ಬಗೆಯ ಗಣಪತಿಗಳನ್ನು ತಯಾರಿಸುವ ಕಲಾವಿದ ರೇವಣ್ಣ ಈ ಬಾರಿ ಗಣೇಶನ ಮಣ್ಣಿನಾಕೃತಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಣ್ಣಿನ ಆಕೃತಿ ಹಾಗೂ ಅಯೋದ್ಯೆಯಲ್ಲಿ ಶ್ರೀರಾಮ ಲಲ್ಲನ ವಿಗ್ರಹ ಕೆತ್ತಿದ ಮೈಸೂರಿನ ಕಲಾವಿದ ಅರುಣ್ ಯೋಗಿ ರಾಜ್ ಅವರ ಮಣ್ಣಿನ ಆಕೃತಿಯನ್ನು ಗಣೇಶನ ವಿಗ್ರಹದಲ್ಲಿ ಪೂಜೆ ಸಲ್ಲಿಸುವ ಮಾದರಿ ತಯಾರಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…