ನಾಡಿನಾದ್ಯಂತ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ.ಮೈಸೂರಿನ ಈ ಗಣಪ ಹಾಗೂ ಇಲ್ಲಿರುವ ಪ್ರತಿಮೆಗಳು ಗಮನ ಸೆಳೆದಿದೆ. ದೇಶ ಹಾಗೂ ರಾಜ್ಯದ ಗಮನಸೆಳೆದ ಮೈಸೂರಿನ ಪ್ರಮುಖರ ಮಣ್ಣಿನ ಆಕೃತಿಯನ್ನು ಗಣಪತಿ ಮೂಲಕ ಪ್ರಸ್ತುತಪಡಿಸುವ ಕಾರ್ಯಕ್ಕೆ ಮೈಸೂರಿನ ಕಲಾವಿದ ರೇವಣ್ಣ ಮುಂದಾಗಿದ್ದಾರೆ. ಇದು ಈ ಬಾರಿಯ ವಿಶೇಷ.
ಈ ಬಾರಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ವಿಶೇಷ ಗಣೇಶನ ಮಣ್ಣಿನ ಆಕೃತಿಯೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಗಮನ ಸೆಳೆದ ಜಿಲ್ಲೆಯ ಪ್ರಮುಖರಾದ ಕಲಾವಿದ ಅರುಣ್ ಯೋಗಿ ರಾಜ್, ಮೇಘಾಲಯ ರಾಜ್ಯಪಾಲ ಹಾಗೂ ಮೈಸೂರಿನವರೇ ಆದ ಸಿ ಹೆಚ್ ವಿಜಯ್ ಶಂಕರ್ ಹಾಗೂ ಮೈಸೂರು ಕೊಡಗು ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಹಾಗೂ ಶ್ರೇಷ್ಠ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದ ನಟ ರಿಷಬ್ ಶೆಟ್ಟಿ ಅವರ ಮಣ್ಣಿನಾಕೃತಿ ರಚಿಸುವ ಮೂಲಕ ಕಲಾವಿದ ಮೈಸೂರಿನ ಕುಂಬಾರಗೇರಿಯ ಕಲಾವಿದ ರೇವಣ್ಣ ಜನರ ಗಮನ ಸೆಳೆದಿದ್ದಾರೆ.
ಮಣ್ಣಿನಲ್ಲಿ ಪರಿಸರ ಮಾಲಿನ್ಯ ಮುಕ್ತ ಬಗೆ ಬಗೆಯ ಗಣಪತಿಗಳನ್ನು ತಯಾರಿಸುವ ಕಲಾವಿದ ರೇವಣ್ಣ ಈ ಬಾರಿ ಗಣೇಶನ ಮಣ್ಣಿನಾಕೃತಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಣ್ಣಿನ ಆಕೃತಿ ಹಾಗೂ ಅಯೋದ್ಯೆಯಲ್ಲಿ ಶ್ರೀರಾಮ ಲಲ್ಲನ ವಿಗ್ರಹ ಕೆತ್ತಿದ ಮೈಸೂರಿನ ಕಲಾವಿದ ಅರುಣ್ ಯೋಗಿ ರಾಜ್ ಅವರ ಮಣ್ಣಿನ ಆಕೃತಿಯನ್ನು ಗಣೇಶನ ವಿಗ್ರಹದಲ್ಲಿ ಪೂಜೆ ಸಲ್ಲಿಸುವ ಮಾದರಿ ತಯಾರಿಸುವ ಮೂಲಕ ಗೌರವ ಸಲ್ಲಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…