ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

June 10, 2024
11:32 PM
ಅಡಿಕೆ ಕಳ್ಳಸಾಗಾಣಿಕೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಚೆಗೆ ವಿದೇಶದಿಂದ ಬೃಹತ್‌ ಪ್ರಮಾಣದಲ್ಲಿ ಅಡಿಕೆ ಆಮದಾಗಿತ್ತು.

ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ತನಿಖಾ ತಂಡವು ವಶಕ್ಕೆ ತೆಗೆದುಕೊಂಡಿದೆ. ಕಳೆದ ಹಲವು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ನಡೆಯುತ್ತಿತ್ತು. ಈಚೆಗೆ ಕಸ್ಟಮ್ಸ್‌ನ ಗುಪ್ತಚರ ಮತ್ತು ತನಿಖಾ ದಳವು 9.65 ಕೋಟಿ ರೂಪಾಯಿಯ 189.6 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆಯನ್ನು ವಶಪಡಿಸಿಕೊಂಡಿತ್ತು.

Advertisement
Advertisement

ಅಡಿಕೆ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ನಡೆಸಲು ಆಮದುದಾರರು ಮತ್ತು ರಫ್ತುದಾರರಿಗೆ ಹಲವಾರು ಸಮನ್ಸ್‌ಗಳು ಮತ್ತು ಹುಡುಕಾಟ ನಡೆಸುತ್ತಿದ್ದ ಕಸ್ಟಮ್ಸ್‌ನ ವಿಶೇಷ ಗುಪ್ತಚರ ಮತ್ತು ತನಿಖಾ ದಳವು ಇದೀಗ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದೆ.

Advertisement

ಯುಎಇಯಿಂದ ಭಾರತಕ್ಕೆ ಕಳ್ಳಸಾಗಣೆಯಾದ ಅಡಿಕೆಯ ವಾರೀಸುದಾರರಾದ ಘಾಟ್‌ಕೋಪರ್‌ನ  ಮುಖೇಶ್ ಮಾಧವಿ ಭಾನುಶಾಲಿ.  ತಪ್ಪು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಣೆ ಮಾಡಲಾಗಿತ್ತು. ಡಾಬರು ಹೆಸರಿನಲ್ಲಿ ಅಡಿಕೆ ಸಾಗಾಟ ನಡೆದಿತ್ತು. ಈ  ಪ್ರಕರಣದಲ್ಲಿ ಮುಂದ್ರಾ ಸೇರಿದಂತೆ ವಿವಿಧ ಬಂದರುಗಳಲ್ಲಿ ಕಸ್ಟಮ್ಸ್  ತನಿಖೆಗಳನ್ನು ಪ್ರಾರಂಭಿಸಿದೆ, ಎಲ್ಲಾ ಪ್ರಕರಣದಲ್ಲಿ ತೆರಿಗೆ ತಪ್ಪಿಸಿ ಅಡಿಕೆ ಸಾಗಾಣಿಕೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಸುಮಾರು 11.63 ಕೋಟಿ  ರೂಪಾಯಿ ತೆರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಾಗಾಟವಾಗಿ ಬಹುಪಾಲು ಅಡಿಕೆಯು ಗುಟ್ಕಾ ಉದ್ಯಮದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ದೇಶಿಯ ಅಡಿಕೆ ಪೂರೈಕೆಯ ಕೊರತೆಯ ಹಿನ್ನೆಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಕಡಿಮೆ ದರದಲ್ಲಿ ವಿದೇಶಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಗಂಭೀರವಾಗಿ ತನಿಖೆ ಆರಂಭವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ
October 5, 2024
12:14 PM
by: ಸಾಯಿಶೇಖರ್ ಕರಿಕಳ
ಬಳ್ಪದ ತ್ರಿಶೂಲಿನೀ ದೇವಸ್ಥಾನ | ಕದಂಬರ ಕಾಲದ ದೇವಾಲಯದಲ್ಲಿ ನವರಾತ್ರಿ ಸಂಭ್ರಮ |
October 5, 2024
7:43 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ
October 4, 2024
3:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-10-2024 | ಗುಡುಗು ಸಹಿತ ಮಳೆ ಮುಂದುವರಿಕೆ | ಹಿಂಗಾರು ಮತ್ತಷ್ಟು ವಿಳಂಬ |
October 4, 2024
1:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror