Advertisement
ಸುದ್ದಿಗಳು

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

Share

ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ತನಿಖಾ ತಂಡವು ವಶಕ್ಕೆ ತೆಗೆದುಕೊಂಡಿದೆ. ಕಳೆದ ಹಲವು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ನಡೆಯುತ್ತಿತ್ತು. ಈಚೆಗೆ ಕಸ್ಟಮ್ಸ್‌ನ ಗುಪ್ತಚರ ಮತ್ತು ತನಿಖಾ ದಳವು 9.65 ಕೋಟಿ ರೂಪಾಯಿಯ 189.6 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆಯನ್ನು ವಶಪಡಿಸಿಕೊಂಡಿತ್ತು.

ಅಡಿಕೆ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ನಡೆಸಲು ಆಮದುದಾರರು ಮತ್ತು ರಫ್ತುದಾರರಿಗೆ ಹಲವಾರು ಸಮನ್ಸ್‌ಗಳು ಮತ್ತು ಹುಡುಕಾಟ ನಡೆಸುತ್ತಿದ್ದ ಕಸ್ಟಮ್ಸ್‌ನ ವಿಶೇಷ ಗುಪ್ತಚರ ಮತ್ತು ತನಿಖಾ ದಳವು ಇದೀಗ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದೆ.

ಯುಎಇಯಿಂದ ಭಾರತಕ್ಕೆ ಕಳ್ಳಸಾಗಣೆಯಾದ ಅಡಿಕೆಯ ವಾರೀಸುದಾರರಾದ ಘಾಟ್‌ಕೋಪರ್‌ನ  ಮುಖೇಶ್ ಮಾಧವಿ ಭಾನುಶಾಲಿ.  ತಪ್ಪು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಣೆ ಮಾಡಲಾಗಿತ್ತು. ಡಾಬರು ಹೆಸರಿನಲ್ಲಿ ಅಡಿಕೆ ಸಾಗಾಟ ನಡೆದಿತ್ತು. ಈ  ಪ್ರಕರಣದಲ್ಲಿ ಮುಂದ್ರಾ ಸೇರಿದಂತೆ ವಿವಿಧ ಬಂದರುಗಳಲ್ಲಿ ಕಸ್ಟಮ್ಸ್  ತನಿಖೆಗಳನ್ನು ಪ್ರಾರಂಭಿಸಿದೆ, ಎಲ್ಲಾ ಪ್ರಕರಣದಲ್ಲಿ ತೆರಿಗೆ ತಪ್ಪಿಸಿ ಅಡಿಕೆ ಸಾಗಾಣಿಕೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಸುಮಾರು 11.63 ಕೋಟಿ  ರೂಪಾಯಿ ತೆರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಾಗಾಟವಾಗಿ ಬಹುಪಾಲು ಅಡಿಕೆಯು ಗುಟ್ಕಾ ಉದ್ಯಮದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ದೇಶಿಯ ಅಡಿಕೆ ಪೂರೈಕೆಯ ಕೊರತೆಯ ಹಿನ್ನೆಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಕಡಿಮೆ ದರದಲ್ಲಿ ವಿದೇಶಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಗಂಭೀರವಾಗಿ ತನಿಖೆ ಆರಂಭವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

24 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

1 day ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago