Advertisement
ಸುದ್ದಿಗಳು

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

Share

ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ತನಿಖಾ ತಂಡವು ವಶಕ್ಕೆ ತೆಗೆದುಕೊಂಡಿದೆ. ಕಳೆದ ಹಲವು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ನಡೆಯುತ್ತಿತ್ತು. ಈಚೆಗೆ ಕಸ್ಟಮ್ಸ್‌ನ ಗುಪ್ತಚರ ಮತ್ತು ತನಿಖಾ ದಳವು 9.65 ಕೋಟಿ ರೂಪಾಯಿಯ 189.6 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆಯನ್ನು ವಶಪಡಿಸಿಕೊಂಡಿತ್ತು.

Advertisement
Advertisement

ಅಡಿಕೆ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ನಡೆಸಲು ಆಮದುದಾರರು ಮತ್ತು ರಫ್ತುದಾರರಿಗೆ ಹಲವಾರು ಸಮನ್ಸ್‌ಗಳು ಮತ್ತು ಹುಡುಕಾಟ ನಡೆಸುತ್ತಿದ್ದ ಕಸ್ಟಮ್ಸ್‌ನ ವಿಶೇಷ ಗುಪ್ತಚರ ಮತ್ತು ತನಿಖಾ ದಳವು ಇದೀಗ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದೆ.

Advertisement

ಯುಎಇಯಿಂದ ಭಾರತಕ್ಕೆ ಕಳ್ಳಸಾಗಣೆಯಾದ ಅಡಿಕೆಯ ವಾರೀಸುದಾರರಾದ ಘಾಟ್‌ಕೋಪರ್‌ನ  ಮುಖೇಶ್ ಮಾಧವಿ ಭಾನುಶಾಲಿ.  ತಪ್ಪು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಣೆ ಮಾಡಲಾಗಿತ್ತು. ಡಾಬರು ಹೆಸರಿನಲ್ಲಿ ಅಡಿಕೆ ಸಾಗಾಟ ನಡೆದಿತ್ತು. ಈ  ಪ್ರಕರಣದಲ್ಲಿ ಮುಂದ್ರಾ ಸೇರಿದಂತೆ ವಿವಿಧ ಬಂದರುಗಳಲ್ಲಿ ಕಸ್ಟಮ್ಸ್  ತನಿಖೆಗಳನ್ನು ಪ್ರಾರಂಭಿಸಿದೆ, ಎಲ್ಲಾ ಪ್ರಕರಣದಲ್ಲಿ ತೆರಿಗೆ ತಪ್ಪಿಸಿ ಅಡಿಕೆ ಸಾಗಾಣಿಕೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಸುಮಾರು 11.63 ಕೋಟಿ  ರೂಪಾಯಿ ತೆರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಾಗಾಟವಾಗಿ ಬಹುಪಾಲು ಅಡಿಕೆಯು ಗುಟ್ಕಾ ಉದ್ಯಮದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ದೇಶಿಯ ಅಡಿಕೆ ಪೂರೈಕೆಯ ಕೊರತೆಯ ಹಿನ್ನೆಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಕಡಿಮೆ ದರದಲ್ಲಿ ವಿದೇಶಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಗಂಭೀರವಾಗಿ ತನಿಖೆ ಆರಂಭವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!

ಡ್ರಾಗನ್‌ ಫ್ರುಟ್‌ ಕೃಷಿ ಮಾಡಿ ಸ್ವತ: ಮಾರುಕಟ್ಟೆಯನ್ನೂ ಕಂಡುಕೊಂಡು ಮಾರಾಟವನ್ನೂ ಮಾಡುವ ಮೂಲಕ…

6 hours ago

ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |

ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಸಾರ್ವಜನಿಕರ ಹಿತಾಸಕ್ತಿಯನ್ನು…

7 hours ago

ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು…!

ಭೂಕಂಪಕ್ಕೂ(Earthquake) ಕುಗ್ಗಲ್ಲ, ಚಂಡಮಾರುತಕ್ಕೂ(Cyclone) ಜಗ್ಗಲ್ಲ, ನಮ್ಮ ಕಂಪನಿಯ ಕಬ್ಬಿಣ(Iron) ಮತ್ತು ಉಕ್ಕು(Steel). ಹಾಗೆಯೇ…

14 hours ago

ನಿಮಗಿದು ಗೊತ್ತೇ…? | RO ಹಾಗೂ ಬಾಟಲಿ ನೀರುಗಳನ್ನು ತ್ಯಜಿಸಿ ಮನೆಯಲ್ಲಿ ಸಜೀವಗೊಳಿಸಿದ ನೀರನ್ನು ಬಳಸಿ

"ಜಲವೇ ಜೀವನ," "ಜೀವ ಜಲ," "ಜಲವೇ ಅಮೃತ," "ಅಮೃತ ಜಲ"(Water) ಇತ್ಯಾದಿಯಾಗಿ ನೀರಿನ…

15 hours ago

ಪಶುಗಳ ಪಾಲಿನ “ಆನಂದ” ಡಾಕ್ಟರ್ ಆನಂದ್ | ಪಶು ವೈದ್ಯಕೀಯ ಸಚಿವಾಲಯ ಮಲೆನಾಡಿನ ಕಡೆಯಲ್ಲಿ ವೈದ್ಯರ ಸಂಖ್ಯೆ ಹೆಚ್ಚಿಸಬೇಕು |

ಗ್ರಾಮೀಣ ಭಾಗದಲ್ಲಿ ಪಶು ಸೇರಿದಂತೆ ಇತರ ಸಾಕುಪ್ರಾಣಿಗಳಿಗೆ ಚಿಕಿತ್ಸೆ ನೀಡಲು ಸೂಕ್ತ ವೈದ್ಯರ…

15 hours ago

ಕೀನ್ಯಾದಲ್ಲಿ ಕಾಗೆಗಳನ್ನು ಕೊಲ್ಲಲು ಆದೇಶ | ಈಗ ಅಮೇರಿಕಾದಲ್ಲಿ ನಾಲ್ಕೂವರೆ ಲಕ್ಷ ಗೂಬೆಗಳನ್ನು ಕೊಲ್ಲಲು ಆದೇಶ..! | ಕಾರಣ ಏನು ಗೊತ್ತಾ..?

ಅಮೇರಿಕಾದ ವನ್ಯಜೀವಿ ಅಧಿಕಾರಿಗಳು ಅಳಿವಿನಂಚಿನಲ್ಲಿರುವ ಮಚ್ಚೆಯುಳ್ಳ ಗೂಬೆಗಳನ್ನು ಉಳಿಸಲು ನಿಷೇಧಿತ ಗೂಬೆಗಳನ್ನು ಕೊಲ್ಲಲು…

15 hours ago