ಸುದ್ದಿಗಳು

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ತನಿಖಾ ತಂಡವು ವಶಕ್ಕೆ ತೆಗೆದುಕೊಂಡಿದೆ. ಕಳೆದ ಹಲವು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ನಡೆಯುತ್ತಿತ್ತು. ಈಚೆಗೆ ಕಸ್ಟಮ್ಸ್‌ನ ಗುಪ್ತಚರ ಮತ್ತು ತನಿಖಾ ದಳವು 9.65 ಕೋಟಿ ರೂಪಾಯಿಯ 189.6 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆಯನ್ನು ವಶಪಡಿಸಿಕೊಂಡಿತ್ತು.

Advertisement
Advertisement

ಅಡಿಕೆ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ನಡೆಸಲು ಆಮದುದಾರರು ಮತ್ತು ರಫ್ತುದಾರರಿಗೆ ಹಲವಾರು ಸಮನ್ಸ್‌ಗಳು ಮತ್ತು ಹುಡುಕಾಟ ನಡೆಸುತ್ತಿದ್ದ ಕಸ್ಟಮ್ಸ್‌ನ ವಿಶೇಷ ಗುಪ್ತಚರ ಮತ್ತು ತನಿಖಾ ದಳವು ಇದೀಗ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದೆ.

ಯುಎಇಯಿಂದ ಭಾರತಕ್ಕೆ ಕಳ್ಳಸಾಗಣೆಯಾದ ಅಡಿಕೆಯ ವಾರೀಸುದಾರರಾದ ಘಾಟ್‌ಕೋಪರ್‌ನ  ಮುಖೇಶ್ ಮಾಧವಿ ಭಾನುಶಾಲಿ.  ತಪ್ಪು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಣೆ ಮಾಡಲಾಗಿತ್ತು. ಡಾಬರು ಹೆಸರಿನಲ್ಲಿ ಅಡಿಕೆ ಸಾಗಾಟ ನಡೆದಿತ್ತು. ಈ  ಪ್ರಕರಣದಲ್ಲಿ ಮುಂದ್ರಾ ಸೇರಿದಂತೆ ವಿವಿಧ ಬಂದರುಗಳಲ್ಲಿ ಕಸ್ಟಮ್ಸ್  ತನಿಖೆಗಳನ್ನು ಪ್ರಾರಂಭಿಸಿದೆ, ಎಲ್ಲಾ ಪ್ರಕರಣದಲ್ಲಿ ತೆರಿಗೆ ತಪ್ಪಿಸಿ ಅಡಿಕೆ ಸಾಗಾಣಿಕೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಸುಮಾರು 11.63 ಕೋಟಿ  ರೂಪಾಯಿ ತೆರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಾಗಾಟವಾಗಿ ಬಹುಪಾಲು ಅಡಿಕೆಯು ಗುಟ್ಕಾ ಉದ್ಯಮದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ದೇಶಿಯ ಅಡಿಕೆ ಪೂರೈಕೆಯ ಕೊರತೆಯ ಹಿನ್ನೆಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಕಡಿಮೆ ದರದಲ್ಲಿ ವಿದೇಶಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಗಂಭೀರವಾಗಿ ತನಿಖೆ ಆರಂಭವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

3 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

4 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

4 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

4 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

4 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

5 hours ago