ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಆಮದು-ರಫ್ತು ಲೈಸನ್ಸ್ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ತನಿಖಾ ತಂಡವು ವಶಕ್ಕೆ ತೆಗೆದುಕೊಂಡಿದೆ. ಕಳೆದ ಹಲವು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ನಡೆಯುತ್ತಿತ್ತು. ಈಚೆಗೆ ಕಸ್ಟಮ್ಸ್ನ ಗುಪ್ತಚರ ಮತ್ತು ತನಿಖಾ ದಳವು 9.65 ಕೋಟಿ ರೂಪಾಯಿಯ 189.6 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆಯನ್ನು ವಶಪಡಿಸಿಕೊಂಡಿತ್ತು.
ಅಡಿಕೆ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ನಡೆಸಲು ಆಮದುದಾರರು ಮತ್ತು ರಫ್ತುದಾರರಿಗೆ ಹಲವಾರು ಸಮನ್ಸ್ಗಳು ಮತ್ತು ಹುಡುಕಾಟ ನಡೆಸುತ್ತಿದ್ದ ಕಸ್ಟಮ್ಸ್ನ ವಿಶೇಷ ಗುಪ್ತಚರ ಮತ್ತು ತನಿಖಾ ದಳವು ಇದೀಗ ಆಮದು-ರಫ್ತು ಲೈಸನ್ಸ್ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದೆ.
ಯುಎಇಯಿಂದ ಭಾರತಕ್ಕೆ ಕಳ್ಳಸಾಗಣೆಯಾದ ಅಡಿಕೆಯ ವಾರೀಸುದಾರರಾದ ಘಾಟ್ಕೋಪರ್ನ ಮುಖೇಶ್ ಮಾಧವಿ ಭಾನುಶಾಲಿ. ತಪ್ಪು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಣೆ ಮಾಡಲಾಗಿತ್ತು. ಡಾಬರು ಹೆಸರಿನಲ್ಲಿ ಅಡಿಕೆ ಸಾಗಾಟ ನಡೆದಿತ್ತು. ಈ ಪ್ರಕರಣದಲ್ಲಿ ಮುಂದ್ರಾ ಸೇರಿದಂತೆ ವಿವಿಧ ಬಂದರುಗಳಲ್ಲಿ ಕಸ್ಟಮ್ಸ್ ತನಿಖೆಗಳನ್ನು ಪ್ರಾರಂಭಿಸಿದೆ, ಎಲ್ಲಾ ಪ್ರಕರಣದಲ್ಲಿ ತೆರಿಗೆ ತಪ್ಪಿಸಿ ಅಡಿಕೆ ಸಾಗಾಣಿಕೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಸುಮಾರು 11.63 ಕೋಟಿ ರೂಪಾಯಿ ತೆರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಅಕ್ರಮವಾಗಿ ಸಾಗಾಟವಾಗಿ ಬಹುಪಾಲು ಅಡಿಕೆಯು ಗುಟ್ಕಾ ಉದ್ಯಮದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ದೇಶಿಯ ಅಡಿಕೆ ಪೂರೈಕೆಯ ಕೊರತೆಯ ಹಿನ್ನೆಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಕಡಿಮೆ ದರದಲ್ಲಿ ವಿದೇಶಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಗಂಭೀರವಾಗಿ ತನಿಖೆ ಆರಂಭವಾಗಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…