Advertisement
ಸುದ್ದಿಗಳು

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

Share

ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ತನಿಖಾ ತಂಡವು ವಶಕ್ಕೆ ತೆಗೆದುಕೊಂಡಿದೆ. ಕಳೆದ ಹಲವು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ನಡೆಯುತ್ತಿತ್ತು. ಈಚೆಗೆ ಕಸ್ಟಮ್ಸ್‌ನ ಗುಪ್ತಚರ ಮತ್ತು ತನಿಖಾ ದಳವು 9.65 ಕೋಟಿ ರೂಪಾಯಿಯ 189.6 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆಯನ್ನು ವಶಪಡಿಸಿಕೊಂಡಿತ್ತು.

ಅಡಿಕೆ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ನಡೆಸಲು ಆಮದುದಾರರು ಮತ್ತು ರಫ್ತುದಾರರಿಗೆ ಹಲವಾರು ಸಮನ್ಸ್‌ಗಳು ಮತ್ತು ಹುಡುಕಾಟ ನಡೆಸುತ್ತಿದ್ದ ಕಸ್ಟಮ್ಸ್‌ನ ವಿಶೇಷ ಗುಪ್ತಚರ ಮತ್ತು ತನಿಖಾ ದಳವು ಇದೀಗ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದೆ.

ಯುಎಇಯಿಂದ ಭಾರತಕ್ಕೆ ಕಳ್ಳಸಾಗಣೆಯಾದ ಅಡಿಕೆಯ ವಾರೀಸುದಾರರಾದ ಘಾಟ್‌ಕೋಪರ್‌ನ  ಮುಖೇಶ್ ಮಾಧವಿ ಭಾನುಶಾಲಿ.  ತಪ್ಪು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಣೆ ಮಾಡಲಾಗಿತ್ತು. ಡಾಬರು ಹೆಸರಿನಲ್ಲಿ ಅಡಿಕೆ ಸಾಗಾಟ ನಡೆದಿತ್ತು. ಈ  ಪ್ರಕರಣದಲ್ಲಿ ಮುಂದ್ರಾ ಸೇರಿದಂತೆ ವಿವಿಧ ಬಂದರುಗಳಲ್ಲಿ ಕಸ್ಟಮ್ಸ್  ತನಿಖೆಗಳನ್ನು ಪ್ರಾರಂಭಿಸಿದೆ, ಎಲ್ಲಾ ಪ್ರಕರಣದಲ್ಲಿ ತೆರಿಗೆ ತಪ್ಪಿಸಿ ಅಡಿಕೆ ಸಾಗಾಣಿಕೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಸುಮಾರು 11.63 ಕೋಟಿ  ರೂಪಾಯಿ ತೆರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಾಗಾಟವಾಗಿ ಬಹುಪಾಲು ಅಡಿಕೆಯು ಗುಟ್ಕಾ ಉದ್ಯಮದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ದೇಶಿಯ ಅಡಿಕೆ ಪೂರೈಕೆಯ ಕೊರತೆಯ ಹಿನ್ನೆಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಕಡಿಮೆ ದರದಲ್ಲಿ ವಿದೇಶಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಗಂಭೀರವಾಗಿ ತನಿಖೆ ಆರಂಭವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

6 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

7 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

7 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

7 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

7 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

15 hours ago