Advertisement
ಸುದ್ದಿಗಳು

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ವಶಕ್ಕೆ ಪಡೆದ ತನಿಖಾ ತಂಡ |

Share

ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ತನಿಖಾ ತಂಡವು ವಶಕ್ಕೆ ತೆಗೆದುಕೊಂಡಿದೆ. ಕಳೆದ ಹಲವು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಅಡಿಕೆ ಆಮದು ನಡೆಯುತ್ತಿತ್ತು. ಈಚೆಗೆ ಕಸ್ಟಮ್ಸ್‌ನ ಗುಪ್ತಚರ ಮತ್ತು ತನಿಖಾ ದಳವು 9.65 ಕೋಟಿ ರೂಪಾಯಿಯ 189.6 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆಯನ್ನು ವಶಪಡಿಸಿಕೊಂಡಿತ್ತು.

ಅಡಿಕೆ ಕಳ್ಳಸಾಗಣೆ ಪ್ರಕರಣದಲ್ಲಿ ತನಿಖೆ ನಡೆಸಲು ಆಮದುದಾರರು ಮತ್ತು ರಫ್ತುದಾರರಿಗೆ ಹಲವಾರು ಸಮನ್ಸ್‌ಗಳು ಮತ್ತು ಹುಡುಕಾಟ ನಡೆಸುತ್ತಿದ್ದ ಕಸ್ಟಮ್ಸ್‌ನ ವಿಶೇಷ ಗುಪ್ತಚರ ಮತ್ತು ತನಿಖಾ ದಳವು ಇದೀಗ ಆಮದು-ರಫ್ತು ಲೈಸನ್ಸ್‌ ಹೊಂದಿರುವ ಸಂಸ್ಥೆಯ ನಿರ್ದೇಶಕರೊಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದೆ.

ಯುಎಇಯಿಂದ ಭಾರತಕ್ಕೆ ಕಳ್ಳಸಾಗಣೆಯಾದ ಅಡಿಕೆಯ ವಾರೀಸುದಾರರಾದ ಘಾಟ್‌ಕೋಪರ್‌ನ  ಮುಖೇಶ್ ಮಾಧವಿ ಭಾನುಶಾಲಿ.  ತಪ್ಪು ಮಾಹಿತಿ ನೀಡಿ ಅಡಿಕೆ ಕಳ್ಳಸಾಗಣೆ ಮಾಡಲಾಗಿತ್ತು. ಡಾಬರು ಹೆಸರಿನಲ್ಲಿ ಅಡಿಕೆ ಸಾಗಾಟ ನಡೆದಿತ್ತು. ಈ  ಪ್ರಕರಣದಲ್ಲಿ ಮುಂದ್ರಾ ಸೇರಿದಂತೆ ವಿವಿಧ ಬಂದರುಗಳಲ್ಲಿ ಕಸ್ಟಮ್ಸ್  ತನಿಖೆಗಳನ್ನು ಪ್ರಾರಂಭಿಸಿದೆ, ಎಲ್ಲಾ ಪ್ರಕರಣದಲ್ಲಿ ತೆರಿಗೆ ತಪ್ಪಿಸಿ ಅಡಿಕೆ ಸಾಗಾಣಿಕೆ ಮಾಡಲಾಗಿತ್ತು.ಈ ಪ್ರಕರಣದಲ್ಲಿ ಸುಮಾರು 11.63 ಕೋಟಿ  ರೂಪಾಯಿ ತೆರಿಗೆ ವಂಚಿಸಲು ಯತ್ನಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಾಗಾಟವಾಗಿ ಬಹುಪಾಲು ಅಡಿಕೆಯು ಗುಟ್ಕಾ ಉದ್ಯಮದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ದೇಶಿಯ ಅಡಿಕೆ ಪೂರೈಕೆಯ ಕೊರತೆಯ ಹಿನ್ನೆಲೆಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮೂಲಕ ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಸಾಕಷ್ಟು ಪ್ರಮಾಣದಲ್ಲಿದ್ದರೂ, ಕಡಿಮೆ ದರದಲ್ಲಿ ವಿದೇಶಿ ಅಡಿಕೆ ಆಮದು ಮಾಡಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಗಂಭೀರವಾಗಿ ತನಿಖೆ ಆರಂಭವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

2 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

6 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

10 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

20 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

20 hours ago