Advertisement
ಸುದ್ದಿಗಳು

#Chandrayan3 | ಚಂದ್ರಯಾನ-3 ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ | ಮಹಾಪೂಜೆ, ಕಾರ್ತಿಕ ಪೂಜಾ ಸೇವೆ |

Share

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ3  ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯಂದು ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು.


ಭಾರತದ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ 3 ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ಇತಿಹಾಸ ನಿರ್ಮಿಸಲಿ ಮತ್ತು ಇದರೊಂದಿಗೆ ನಮ್ಮ ರಾಷ್ಟ್ರದ ಹೆಸರು ಪ್ರಪಂಚದಲ್ಲೆ ಅಗ್ರಗಣ್ಯವಾಗಲಿ ಎಂದು ಕುಕ್ಕೆ ಸುಬ್ರಹ್ಮಣ್ಯನಿಗೆ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ನೇತೃತ್ವದಲ್ಲಿ ದೇವಳದ ಆಡಳಿತ ಮಂಡಳಿ, ಊರ ಹಿರಿಯರು ಮತ್ತು ಸಾರ್ವಜನಿಕ ಭಕ್ತರು ನಾಗರಪಂಚಮಿಯ ಪುಣ್ಯ ದಿನ ಕುಕ್ಕೆ ಸುಬ್ರಹ್ಮಣ್ಯನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಅಲ್ಲದೆ ಇಸ್ರೋ ಸಂಸ್ಥೆಯ ಪರವಾಗಿ ನಾಗರಾಜನಿಗೆ ಹಾಲು ಅರ್ಪಿಸಿದರು. ಶ್ರೀ ದೇವಳದ ಆಡಳಿತ ಮಹಾಪೂಜೆ ಮತ್ತು ನಾಗ ತಂಬಿಲ(ಕಾರ್ತಿಕ ಪೂಜೆ) ಸೇವೆ ಸಮರ್ಪಿಸಿ ಚಂದ್ರಯಾನ 3 ಯಶಸ್ಸಿಗೆ ದೇವಳದ ಆಡಳಿತ ಮಂಡಳಿ ಮತ್ತು ಊರ ಹಿರಿಯರು,ಭಕ್ತರು ಪ್ರಾರ್ಥಿಸಿದರು.

ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್‌ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡುಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

4 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

5 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

9 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

10 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

20 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

20 hours ago