ಭಾರತೀಯ ಅಂಚೆ ಇಲಾಖೆಯು ಸ್ಪೀಡ್ ಪೋಸ್ಟ್, ಇತರೆ ಪತ್ರ ಹಾಗೂ ಪಾರ್ಸೆಲ್ಗಳ ಬುಕ್ಕಿಂಗ್ ಸೇವಾ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಅಂಚೆ ಕಚೇರಿಗಳಲ್ಲಿ ವಿಸ್ತರಿಸಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ಆರ್.ಅಶೋಕ್ ತಿಳಿಸಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಕೆಲಸದ ದಿನಗಳಿಗೆ ಮಾತ್ರ ಈ ಬುಕ್ಕಿಂಗ್ ಸಮಯದ ವಿಸ್ತರಣೆ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್ ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಹಾಗೂ ಇತರೆ ಅನೇಕ ಸೇವೆಗಳನ್ನು ಮನೆಯಲ್ಲಿಯೇ ಕುಳಿತು ಆನ್ಲೈನ್ ನಲ್ಲಿಯೇ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…