Advertisement
ಸುದ್ದಿಗಳು

ಮೌಲ್ಯವರ್ಧನೆ ಮೂಲಕ ಉತ್ತಮ ಬೆಲೆ ಸಾಧ್ಯ – ರೈತರು ಉದ್ಯಮಿಗಳಾಗಬೇಕು

Share

ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ, ಜಿಲ್ಲಾ ಪಂಚಾಯಿತಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಚಿಕ್ಕಮಗಳೂರಿನಲ್ಲಿ ಕಾಳುಮೆಣಸು ಸೇರಿದಂತೆ ಸಾಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ರಫ್ತು ಕುರಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಂ.ಎನ್. ನಾಗರಾಜ್ ಚಾಲನೆ ನೀಡಿ, ಇದೇ ವೇಳೆ ಸಾಂಬಾರು ಉತ್ಪನ್ನಗಳ ಕುರಿತು ಸಿದ್ಧಪಡಿಸಲಾದ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳಿಗೆ ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಮಾಡುವ ಮೂಲಕ ಉತ್ತಮ ಬೆಲೆ ಪಡೆಯಬಹುದು ಎಂದು ಹೇಳಿದರು. ರೈತರು ಕೇವಲ ಬೆಳೆಗಾರರಾಗಿ ಉಳಿಯದೆ ಉದ್ಯಮಿಗಳಾಗಿ ಹೊರಹೊಮ್ಮುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗಾಕಾಂಕ್ಷಿಗಳಾಗುವುದಕ್ಕಿಂತ ಉದ್ಯಮಶೀಲರಾಗುವತ್ತ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದರು. ರೈತರು ಬೆಳೆದ ಉತ್ಪನ್ನಗಳನ್ನು ಸಂಸ್ಕರಿಸಿ, ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದಾಗಿದೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ತಿರುಮಲೇಶ್ ಮಾತನಾಡಿ, ರಾಗಿ ಸೇರಿದಂತೆ ಪಾರಂಪರಿಕ ಬೆಳೆಗಳನ್ನು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇಂತಹ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ. ರೈತರು ತಮ್ಮ ಬೆಳೆಗಳನ್ನು ಮೌಲ್ಯವರ್ಧನೆ ಮಾಡುವತ್ತ ಗಮನ ಹರಿಸುವುದು ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎಸ್. ಶಿವಪ್ರಸಾದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

A training program on spice processing, value addition, and export was inaugurated by Chikkamagaluru Deputy Commissioner MN Nagaraj. He emphasized that farmers can earn better income through value addition and encouraged them to become entrepreneurs instead of just producers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

1 hour ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

8 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

8 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

17 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago