#NiphaVirus | ಹರಡುತ್ತಿರುವ ನಿಫಾ ವೈರಸ್‌ | ಕೃಷಿಕರಿಗೂ ತಂದಿದೆ ಆತಂಕ |

September 18, 2023
11:59 AM
ಕೇರಳದ ಕೋಝಿಕ್ಕೋಡಿನ  ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ. ಇದೀಗ ನಿಫಾ ವೈರಸ್‌ ಹರಡಲು ಬಾವಲಿಗಳು ಕಾರಣ ಎನ್ನುವ ಸುದ್ದಿಯ ಹಿನ್ನೆಲೆಯಲ್ಲಿ ಕೃಷಿಕರೂ ಆತಂಕಕ್ಕೆ ಒಳಗಾಗಿದ್ದಾರೆ.

ಕೇರಳದ ಕೋಝಿಕ್ಕೋಡ್‌ ಜಿಲ್ಲೆಯಲ್ಲಿ ಹರಡುತ್ತಿರುವ ನಿಫಾ ವೈರಸ್‌ ಬಗ್ಗೆ ಈಗ ಕೃಷಿಕರೂ ಆತಂಕಕ್ಕೆ ಒಳಗಾಗಿದ್ದಾರೆ. ಬಾವಲಿಗಳ ಕಾಟ ಹೆಚ್ಚಾಗಿರುವ ಪ್ರದೇಶದಲ್ಲಿ ಈಗ ಅಡಿಕೆ ಸಹಿತ ಕೃಷಿ ಕೆಲಸಕ್ಕೂ ಆತಂಕವಾಗಿದೆ.

Advertisement

ನಿಫಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ  ಕೃಷಿಕರಿಗೆ ಸವಾಲಾಗಿ ಪರಿಣಮಿಸಿದೆ. ಬಾವಲಿಗಳ ಕೃಷಿಗೂ ಹೆಚ್ಚಾಗಿ ತೊಂದರೆ ಕೊಡುತ್ತವೆ. ಅಡಿಕೆ, ಬಾಳೆ, ತೆಂಗು ಕೃಷಿಯಲ್ಲೂ ಬಾವಲಿಗಳ ಓಡಾಟ ಇರುತ್ತದೆ. ನಿಫಾ ವೈರಸ್‌ ಬಾವಲಿ ಮೂಲಕ ಹರಡುತ್ತದೆ ಎನ್ನುವ ಸುದ್ದಿಯು ಕೇರಳದ ಕೋಝಿಕ್ಕೋಡ್‌ ಪ್ರದೇಶದ ಕೃಷಿಕರಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಕೋಝಿಕ್ಕೋಡ್‌ ಜಿಲ್ಲೆಯಲ್ಲೂ ಅಡಿಕೆ ಸ್ವಲ್ಪ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ವೈರಸ್‌ ಹರಡುವ ಪ್ರದೇಶದಲ್ಲೂ ಅಡಿಕೆ ಕೃಷಿ ಇರುವುದರಿಂದ ಈಗ ಅಡಿಕೆ ಬಾವಲಿ ಕಚ್ಚಿ ಕೆಳಗೆ ಬೀಳಿಸುತ್ತದೆ. ಈ ಅಡಿಕೆಯನ್ನು ಹೆಕ್ಕುವ ಸಂದರ್ಭ ಕೃಷಿಕರಿಗೆ ಭಯದ ವಾತಾವರಣ ಉಂಟಾಗಿದೆ. ವೈರಾಣು ಹರಡುವ ಭೀತಿಯಿಂದ ಅಡಿಕೆ ಸಂಗ್ರಹಿಸಲು ಸಾಧ್ಯವಾಗದ ಪರಿಸ್ಥಿತಿ ಇಲ್ಲಿ ಇದೆ. ಬಾಳೆ ಕೃಷಿ ಸೇರಿದಂತೆ ಹಣ್ಣಿನ ಕೃಷಿಗಳನ್ನು ಬೆಳೆಸುವವರೂ ಇದೇ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ನಿಫಾ ಭೀತಿಯಿಂದ ಹಣ್ಣುಗಳ ಬೆಲೆಯೂ ಇಳಿಕೆಯಾಗಿದೆ. ವಿಶೇಷವಾಗಿ ಕೋಝಿಕ್ಕೋಡಿನ  ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |
May 6, 2025
7:18 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group