ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಹರಡುತ್ತಿರುವ ನಿಫಾ ವೈರಸ್ ಬಗ್ಗೆ ಈಗ ಕೃಷಿಕರೂ ಆತಂಕಕ್ಕೆ ಒಳಗಾಗಿದ್ದಾರೆ. ಬಾವಲಿಗಳ ಕಾಟ ಹೆಚ್ಚಾಗಿರುವ ಪ್ರದೇಶದಲ್ಲಿ ಈಗ ಅಡಿಕೆ ಸಹಿತ ಕೃಷಿ ಕೆಲಸಕ್ಕೂ ಆತಂಕವಾಗಿದೆ.
ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಸವಾಲಾಗಿ ಪರಿಣಮಿಸಿದೆ. ಬಾವಲಿಗಳ ಕೃಷಿಗೂ ಹೆಚ್ಚಾಗಿ ತೊಂದರೆ ಕೊಡುತ್ತವೆ. ಅಡಿಕೆ, ಬಾಳೆ, ತೆಂಗು ಕೃಷಿಯಲ್ಲೂ ಬಾವಲಿಗಳ ಓಡಾಟ ಇರುತ್ತದೆ. ನಿಫಾ ವೈರಸ್ ಬಾವಲಿ ಮೂಲಕ ಹರಡುತ್ತದೆ ಎನ್ನುವ ಸುದ್ದಿಯು ಕೇರಳದ ಕೋಝಿಕ್ಕೋಡ್ ಪ್ರದೇಶದ ಕೃಷಿಕರಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಕೋಝಿಕ್ಕೋಡ್ ಜಿಲ್ಲೆಯಲ್ಲೂ ಅಡಿಕೆ ಸ್ವಲ್ಪ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ವೈರಸ್ ಹರಡುವ ಪ್ರದೇಶದಲ್ಲೂ ಅಡಿಕೆ ಕೃಷಿ ಇರುವುದರಿಂದ ಈಗ ಅಡಿಕೆ ಬಾವಲಿ ಕಚ್ಚಿ ಕೆಳಗೆ ಬೀಳಿಸುತ್ತದೆ. ಈ ಅಡಿಕೆಯನ್ನು ಹೆಕ್ಕುವ ಸಂದರ್ಭ ಕೃಷಿಕರಿಗೆ ಭಯದ ವಾತಾವರಣ ಉಂಟಾಗಿದೆ. ವೈರಾಣು ಹರಡುವ ಭೀತಿಯಿಂದ ಅಡಿಕೆ ಸಂಗ್ರಹಿಸಲು ಸಾಧ್ಯವಾಗದ ಪರಿಸ್ಥಿತಿ ಇಲ್ಲಿ ಇದೆ. ಬಾಳೆ ಕೃಷಿ ಸೇರಿದಂತೆ ಹಣ್ಣಿನ ಕೃಷಿಗಳನ್ನು ಬೆಳೆಸುವವರೂ ಇದೇ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ನಿಫಾ ಭೀತಿಯಿಂದ ಹಣ್ಣುಗಳ ಬೆಲೆಯೂ ಇಳಿಕೆಯಾಗಿದೆ. ವಿಶೇಷವಾಗಿ ಕೋಝಿಕ್ಕೋಡಿನ ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ.
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…