ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಹರಡುತ್ತಿರುವ ನಿಫಾ ವೈರಸ್ ಬಗ್ಗೆ ಈಗ ಕೃಷಿಕರೂ ಆತಂಕಕ್ಕೆ ಒಳಗಾಗಿದ್ದಾರೆ. ಬಾವಲಿಗಳ ಕಾಟ ಹೆಚ್ಚಾಗಿರುವ ಪ್ರದೇಶದಲ್ಲಿ ಈಗ ಅಡಿಕೆ ಸಹಿತ ಕೃಷಿ ಕೆಲಸಕ್ಕೂ ಆತಂಕವಾಗಿದೆ.
ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಸವಾಲಾಗಿ ಪರಿಣಮಿಸಿದೆ. ಬಾವಲಿಗಳ ಕೃಷಿಗೂ ಹೆಚ್ಚಾಗಿ ತೊಂದರೆ ಕೊಡುತ್ತವೆ. ಅಡಿಕೆ, ಬಾಳೆ, ತೆಂಗು ಕೃಷಿಯಲ್ಲೂ ಬಾವಲಿಗಳ ಓಡಾಟ ಇರುತ್ತದೆ. ನಿಫಾ ವೈರಸ್ ಬಾವಲಿ ಮೂಲಕ ಹರಡುತ್ತದೆ ಎನ್ನುವ ಸುದ್ದಿಯು ಕೇರಳದ ಕೋಝಿಕ್ಕೋಡ್ ಪ್ರದೇಶದ ಕೃಷಿಕರಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಕೋಝಿಕ್ಕೋಡ್ ಜಿಲ್ಲೆಯಲ್ಲೂ ಅಡಿಕೆ ಸ್ವಲ್ಪ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ವೈರಸ್ ಹರಡುವ ಪ್ರದೇಶದಲ್ಲೂ ಅಡಿಕೆ ಕೃಷಿ ಇರುವುದರಿಂದ ಈಗ ಅಡಿಕೆ ಬಾವಲಿ ಕಚ್ಚಿ ಕೆಳಗೆ ಬೀಳಿಸುತ್ತದೆ. ಈ ಅಡಿಕೆಯನ್ನು ಹೆಕ್ಕುವ ಸಂದರ್ಭ ಕೃಷಿಕರಿಗೆ ಭಯದ ವಾತಾವರಣ ಉಂಟಾಗಿದೆ. ವೈರಾಣು ಹರಡುವ ಭೀತಿಯಿಂದ ಅಡಿಕೆ ಸಂಗ್ರಹಿಸಲು ಸಾಧ್ಯವಾಗದ ಪರಿಸ್ಥಿತಿ ಇಲ್ಲಿ ಇದೆ. ಬಾಳೆ ಕೃಷಿ ಸೇರಿದಂತೆ ಹಣ್ಣಿನ ಕೃಷಿಗಳನ್ನು ಬೆಳೆಸುವವರೂ ಇದೇ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ನಿಫಾ ಭೀತಿಯಿಂದ ಹಣ್ಣುಗಳ ಬೆಲೆಯೂ ಇಳಿಕೆಯಾಗಿದೆ. ವಿಶೇಷವಾಗಿ ಕೋಝಿಕ್ಕೋಡಿನ ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ.
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…