ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಹರಡುತ್ತಿರುವ ನಿಫಾ ವೈರಸ್ ಬಗ್ಗೆ ಈಗ ಕೃಷಿಕರೂ ಆತಂಕಕ್ಕೆ ಒಳಗಾಗಿದ್ದಾರೆ. ಬಾವಲಿಗಳ ಕಾಟ ಹೆಚ್ಚಾಗಿರುವ ಪ್ರದೇಶದಲ್ಲಿ ಈಗ ಅಡಿಕೆ ಸಹಿತ ಕೃಷಿ ಕೆಲಸಕ್ಕೂ ಆತಂಕವಾಗಿದೆ.
ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಸವಾಲಾಗಿ ಪರಿಣಮಿಸಿದೆ. ಬಾವಲಿಗಳ ಕೃಷಿಗೂ ಹೆಚ್ಚಾಗಿ ತೊಂದರೆ ಕೊಡುತ್ತವೆ. ಅಡಿಕೆ, ಬಾಳೆ, ತೆಂಗು ಕೃಷಿಯಲ್ಲೂ ಬಾವಲಿಗಳ ಓಡಾಟ ಇರುತ್ತದೆ. ನಿಫಾ ವೈರಸ್ ಬಾವಲಿ ಮೂಲಕ ಹರಡುತ್ತದೆ ಎನ್ನುವ ಸುದ್ದಿಯು ಕೇರಳದ ಕೋಝಿಕ್ಕೋಡ್ ಪ್ರದೇಶದ ಕೃಷಿಕರಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಕೋಝಿಕ್ಕೋಡ್ ಜಿಲ್ಲೆಯಲ್ಲೂ ಅಡಿಕೆ ಸ್ವಲ್ಪ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ವೈರಸ್ ಹರಡುವ ಪ್ರದೇಶದಲ್ಲೂ ಅಡಿಕೆ ಕೃಷಿ ಇರುವುದರಿಂದ ಈಗ ಅಡಿಕೆ ಬಾವಲಿ ಕಚ್ಚಿ ಕೆಳಗೆ ಬೀಳಿಸುತ್ತದೆ. ಈ ಅಡಿಕೆಯನ್ನು ಹೆಕ್ಕುವ ಸಂದರ್ಭ ಕೃಷಿಕರಿಗೆ ಭಯದ ವಾತಾವರಣ ಉಂಟಾಗಿದೆ. ವೈರಾಣು ಹರಡುವ ಭೀತಿಯಿಂದ ಅಡಿಕೆ ಸಂಗ್ರಹಿಸಲು ಸಾಧ್ಯವಾಗದ ಪರಿಸ್ಥಿತಿ ಇಲ್ಲಿ ಇದೆ. ಬಾಳೆ ಕೃಷಿ ಸೇರಿದಂತೆ ಹಣ್ಣಿನ ಕೃಷಿಗಳನ್ನು ಬೆಳೆಸುವವರೂ ಇದೇ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ನಿಫಾ ಭೀತಿಯಿಂದ ಹಣ್ಣುಗಳ ಬೆಲೆಯೂ ಇಳಿಕೆಯಾಗಿದೆ. ವಿಶೇಷವಾಗಿ ಕೋಝಿಕ್ಕೋಡಿನ ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…