ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಹರಡುತ್ತಿರುವ ನಿಫಾ ವೈರಸ್ ಬಗ್ಗೆ ಈಗ ಕೃಷಿಕರೂ ಆತಂಕಕ್ಕೆ ಒಳಗಾಗಿದ್ದಾರೆ. ಬಾವಲಿಗಳ ಕಾಟ ಹೆಚ್ಚಾಗಿರುವ ಪ್ರದೇಶದಲ್ಲಿ ಈಗ ಅಡಿಕೆ ಸಹಿತ ಕೃಷಿ ಕೆಲಸಕ್ಕೂ ಆತಂಕವಾಗಿದೆ.
ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಸವಾಲಾಗಿ ಪರಿಣಮಿಸಿದೆ. ಬಾವಲಿಗಳ ಕೃಷಿಗೂ ಹೆಚ್ಚಾಗಿ ತೊಂದರೆ ಕೊಡುತ್ತವೆ. ಅಡಿಕೆ, ಬಾಳೆ, ತೆಂಗು ಕೃಷಿಯಲ್ಲೂ ಬಾವಲಿಗಳ ಓಡಾಟ ಇರುತ್ತದೆ. ನಿಫಾ ವೈರಸ್ ಬಾವಲಿ ಮೂಲಕ ಹರಡುತ್ತದೆ ಎನ್ನುವ ಸುದ್ದಿಯು ಕೇರಳದ ಕೋಝಿಕ್ಕೋಡ್ ಪ್ರದೇಶದ ಕೃಷಿಕರಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಕೋಝಿಕ್ಕೋಡ್ ಜಿಲ್ಲೆಯಲ್ಲೂ ಅಡಿಕೆ ಸ್ವಲ್ಪ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ವೈರಸ್ ಹರಡುವ ಪ್ರದೇಶದಲ್ಲೂ ಅಡಿಕೆ ಕೃಷಿ ಇರುವುದರಿಂದ ಈಗ ಅಡಿಕೆ ಬಾವಲಿ ಕಚ್ಚಿ ಕೆಳಗೆ ಬೀಳಿಸುತ್ತದೆ. ಈ ಅಡಿಕೆಯನ್ನು ಹೆಕ್ಕುವ ಸಂದರ್ಭ ಕೃಷಿಕರಿಗೆ ಭಯದ ವಾತಾವರಣ ಉಂಟಾಗಿದೆ. ವೈರಾಣು ಹರಡುವ ಭೀತಿಯಿಂದ ಅಡಿಕೆ ಸಂಗ್ರಹಿಸಲು ಸಾಧ್ಯವಾಗದ ಪರಿಸ್ಥಿತಿ ಇಲ್ಲಿ ಇದೆ. ಬಾಳೆ ಕೃಷಿ ಸೇರಿದಂತೆ ಹಣ್ಣಿನ ಕೃಷಿಗಳನ್ನು ಬೆಳೆಸುವವರೂ ಇದೇ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ನಿಫಾ ಭೀತಿಯಿಂದ ಹಣ್ಣುಗಳ ಬೆಲೆಯೂ ಇಳಿಕೆಯಾಗಿದೆ. ವಿಶೇಷವಾಗಿ ಕೋಝಿಕ್ಕೋಡಿನ ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…