ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಹರಡುತ್ತಿರುವ ನಿಫಾ ವೈರಸ್ ಬಗ್ಗೆ ಈಗ ಕೃಷಿಕರೂ ಆತಂಕಕ್ಕೆ ಒಳಗಾಗಿದ್ದಾರೆ. ಬಾವಲಿಗಳ ಕಾಟ ಹೆಚ್ಚಾಗಿರುವ ಪ್ರದೇಶದಲ್ಲಿ ಈಗ ಅಡಿಕೆ ಸಹಿತ ಕೃಷಿ ಕೆಲಸಕ್ಕೂ ಆತಂಕವಾಗಿದೆ.
ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಸವಾಲಾಗಿ ಪರಿಣಮಿಸಿದೆ. ಬಾವಲಿಗಳ ಕೃಷಿಗೂ ಹೆಚ್ಚಾಗಿ ತೊಂದರೆ ಕೊಡುತ್ತವೆ. ಅಡಿಕೆ, ಬಾಳೆ, ತೆಂಗು ಕೃಷಿಯಲ್ಲೂ ಬಾವಲಿಗಳ ಓಡಾಟ ಇರುತ್ತದೆ. ನಿಫಾ ವೈರಸ್ ಬಾವಲಿ ಮೂಲಕ ಹರಡುತ್ತದೆ ಎನ್ನುವ ಸುದ್ದಿಯು ಕೇರಳದ ಕೋಝಿಕ್ಕೋಡ್ ಪ್ರದೇಶದ ಕೃಷಿಕರಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಕೋಝಿಕ್ಕೋಡ್ ಜಿಲ್ಲೆಯಲ್ಲೂ ಅಡಿಕೆ ಸ್ವಲ್ಪ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ವೈರಸ್ ಹರಡುವ ಪ್ರದೇಶದಲ್ಲೂ ಅಡಿಕೆ ಕೃಷಿ ಇರುವುದರಿಂದ ಈಗ ಅಡಿಕೆ ಬಾವಲಿ ಕಚ್ಚಿ ಕೆಳಗೆ ಬೀಳಿಸುತ್ತದೆ. ಈ ಅಡಿಕೆಯನ್ನು ಹೆಕ್ಕುವ ಸಂದರ್ಭ ಕೃಷಿಕರಿಗೆ ಭಯದ ವಾತಾವರಣ ಉಂಟಾಗಿದೆ. ವೈರಾಣು ಹರಡುವ ಭೀತಿಯಿಂದ ಅಡಿಕೆ ಸಂಗ್ರಹಿಸಲು ಸಾಧ್ಯವಾಗದ ಪರಿಸ್ಥಿತಿ ಇಲ್ಲಿ ಇದೆ. ಬಾಳೆ ಕೃಷಿ ಸೇರಿದಂತೆ ಹಣ್ಣಿನ ಕೃಷಿಗಳನ್ನು ಬೆಳೆಸುವವರೂ ಇದೇ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ನಿಫಾ ಭೀತಿಯಿಂದ ಹಣ್ಣುಗಳ ಬೆಲೆಯೂ ಇಳಿಕೆಯಾಗಿದೆ. ವಿಶೇಷವಾಗಿ ಕೋಝಿಕ್ಕೋಡಿನ ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…