ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಹರಡುತ್ತಿರುವ ನಿಫಾ ವೈರಸ್ ಬಗ್ಗೆ ಈಗ ಕೃಷಿಕರೂ ಆತಂಕಕ್ಕೆ ಒಳಗಾಗಿದ್ದಾರೆ. ಬಾವಲಿಗಳ ಕಾಟ ಹೆಚ್ಚಾಗಿರುವ ಪ್ರದೇಶದಲ್ಲಿ ಈಗ ಅಡಿಕೆ ಸಹಿತ ಕೃಷಿ ಕೆಲಸಕ್ಕೂ ಆತಂಕವಾಗಿದೆ.
ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೃಷಿಕರಿಗೆ ಸವಾಲಾಗಿ ಪರಿಣಮಿಸಿದೆ. ಬಾವಲಿಗಳ ಕೃಷಿಗೂ ಹೆಚ್ಚಾಗಿ ತೊಂದರೆ ಕೊಡುತ್ತವೆ. ಅಡಿಕೆ, ಬಾಳೆ, ತೆಂಗು ಕೃಷಿಯಲ್ಲೂ ಬಾವಲಿಗಳ ಓಡಾಟ ಇರುತ್ತದೆ. ನಿಫಾ ವೈರಸ್ ಬಾವಲಿ ಮೂಲಕ ಹರಡುತ್ತದೆ ಎನ್ನುವ ಸುದ್ದಿಯು ಕೇರಳದ ಕೋಝಿಕ್ಕೋಡ್ ಪ್ರದೇಶದ ಕೃಷಿಕರಿಗೆ ಆತಂಕಕ್ಕೆ ಕಾರಣವಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಕೋಝಿಕ್ಕೋಡ್ ಜಿಲ್ಲೆಯಲ್ಲೂ ಅಡಿಕೆ ಸ್ವಲ್ಪ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ವೈರಸ್ ಹರಡುವ ಪ್ರದೇಶದಲ್ಲೂ ಅಡಿಕೆ ಕೃಷಿ ಇರುವುದರಿಂದ ಈಗ ಅಡಿಕೆ ಬಾವಲಿ ಕಚ್ಚಿ ಕೆಳಗೆ ಬೀಳಿಸುತ್ತದೆ. ಈ ಅಡಿಕೆಯನ್ನು ಹೆಕ್ಕುವ ಸಂದರ್ಭ ಕೃಷಿಕರಿಗೆ ಭಯದ ವಾತಾವರಣ ಉಂಟಾಗಿದೆ. ವೈರಾಣು ಹರಡುವ ಭೀತಿಯಿಂದ ಅಡಿಕೆ ಸಂಗ್ರಹಿಸಲು ಸಾಧ್ಯವಾಗದ ಪರಿಸ್ಥಿತಿ ಇಲ್ಲಿ ಇದೆ. ಬಾಳೆ ಕೃಷಿ ಸೇರಿದಂತೆ ಹಣ್ಣಿನ ಕೃಷಿಗಳನ್ನು ಬೆಳೆಸುವವರೂ ಇದೇ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ನಿಫಾ ಭೀತಿಯಿಂದ ಹಣ್ಣುಗಳ ಬೆಲೆಯೂ ಇಳಿಕೆಯಾಗಿದೆ. ವಿಶೇಷವಾಗಿ ಕೋಝಿಕ್ಕೋಡಿನ ಬಾಳುಶ್ಶೇರಿ ಕ್ಷೇತ್ರದ ಗುಡ್ಡಗಾಡು ಪ್ರದೇಶದಲ್ಲಿ ಭತ್ತದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಭಾಗದಲ್ಲಿ ಅಡಿಕೆ ಹಾಗೂ ಹಣ್ಣಿನ ಕೃಷಿಯೂ ಇದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…