ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.
ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…