Advertisement
ಸುದ್ದಿಗಳು

#GruhaJyothi | ವಿದ್ಯುತ್ ಕಳ್ಳತನ ಮಾಡಿದಿರೀ ಜೋಕೆ | ‘ಗೃಹ ಜ್ಯೋತಿ’ ಜಾರಿಯಾಗುತ್ತಲೇ ಜಾಗೃತ ದಳ ನಿಯೋಜನೆ

Share

ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ  ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.

ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.

ಸಹಾಯವಾಣಿ:ಕಾನೂನು ವಿರೋಧಿ ಚಟುವಟಿಕೆ ನಡೆಸಿ ವಿದ್ಯುತ್ ಕಳ್ಳತನ ನಡೆಸುತ್ತಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಾರ್ವಜನಿಕರು ನೀಡಬಹುದಾಗಿದೆ. ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಆಗಿರುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

11 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

12 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

13 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

18 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

20 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

1 day ago