ರಾಜ್ಯ ಸರಕಾರದ ನೂತನ ಯೋಜನೆಯಂತೆ ಮಾಸಿಕ 200 ಯೂನಿಟ್ ನ ಉಚಿತ ಕೊಡುಗೆ ಘೋಷಿಸಿದೆ. ಗೃಹ ಜ್ಯೋತಿʼ #GruhaJyothi ಯೋಜನೆ ಜಾರಿಯಾಗುತ್ತಲೇ ಬೆಸ್ಕಾಂ ಇನ್ನೊಂದು ಕಡೆಯಲ್ಲಿ ಅಲರ್ಟ್ ಆಗಿದೆ. ಇದರ ಬೆನ್ನಲ್ಲೇ ಬೆಸ್ಕಾಂ #Bescom ವಿದ್ಯುತ್ ಕಳ್ಳತನ ಹಾಗೂ ದುರುಪಯೋಗ ತಡೆಯಲು ವಿಶೇಷ ಸ್ಕ್ಯಾಡ್ ಅನ್ನ ಅಲರ್ಟ್ ಗೊಳಿಸಿದೆ. ಈ ಮೂಲಕ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 11 ಸ್ಥಳಗಳಲ್ಲಿ ವಿಶೇಷ ಜಾಗೃತ ದಳವನ್ನು ನಿಯೋಜಿಸಿ ಕಾರ್ಯೋನ್ಮುಖಗೊಳಿಸಿದೆ. ಈ ಮೂಲಕ ವಿದ್ಯುತ್ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಬೆಸ್ಕಾಂ ಮೊದಲ ಹೆಜ್ಜೆ ಇಟ್ಟಿದೆ.
ವಿದ್ಯುತ್ ಕಳ್ಳತನಕ್ಕೆ ತಕ್ಕ ಶಾಸ್ತಿ: ವಿದ್ಯುತ್ ರೀಡಿಂಗ್ ಮೀಟರ್ ನಲ್ಲಿ ಹಸ್ತಕ್ಷೇಪ ನಡೆಸಿ ಯಾಂತ್ರಿಕವಾಗಿ ಚಾಲ್ತಿಯಲ್ಲಿರುವ ಮೀಟರ್ ಅನ್ನ ಸ್ಥಗಿತಗೊಳ್ಳುವಂತೆ ಮಾಡುವ ಮೂಲಕ ಹೆಚ್ಚುವರಿ ಕರೆಂಟ್ ಬಾರದಂತೆ ಅಥವಾ ಕಡಿಮೆ ವಿದ್ಯುತ್ ಬಿಲ್ ಬರುವಂತೆ ಮಾಡುವುದು ಮತ್ತು ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವುದು. ಪೂರ್ವನುಮತಿ ಇಲ್ಲದೇ ಪ್ರವಹಿಸುವ ವಿದ್ಯುತ್ ಕಂಬಗಳಿಂದ ಸಂಪರ್ಕ ಪಡೆಯುವುದು, ಇದು ಕಾನೂನಿನ್ವಯ ಗಂಭೀರ ಅಪರಾಧವಾಗಿದೆ. “ಭಾರತೀಯ ವಿದ್ಯುತ್ ಕಾಯ್ದೆ 2003”ರ ಅನ್ವಯ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…