ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

May 16, 2025
9:59 PM

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಪ್ರಖ್ಯಾತಿ ಪಡೆದಿರುತ್ತವೆ. ಅಂತಹ ದೇವಾಲಯಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶ್ರೀಕ್ಷೇತ್ರ ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯವೂ ಒಂದು.

ಸಾವಿರ ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಈ ಸನ್ನಿಧಿಯು ಭಕ್ತರ ಅಭಿಷ್ಠೆಗಳನ್ನು ಈಡೇರಿಸುವ ಮೂಲಕ ಇಂದಿಗೂ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದೆ.   ಶುರ್ಪಾಲಿ ನರಸಿಂಹ ಸ್ವಾಮಿ ದೇವಾಲಯ 1000 ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಇಲ್ಲಿ ತಪೋನಿರತರಾದ ಉತ್ತರಾಧಿಮಠದ 1008 ವಿದ್ಯಾಧೀಶ ತೀರ್ಥ ಶ್ರೀಪಾದರು, 1008 ಸತ್ಯಪ್ರಮೋದತೀರ್ಥ ಶ್ರೀಪಾದಂಗಳವರು, ಇಂದಿನ ಪೀಠಾಧಿಪತಿಗಳಾದ 1008 ಸತ್ಯಾತ್ಮತೀರ್ಥ ಶ್ರೀಪಾದಂಗಳವರು, ಯಾದವಾರ್ಯರು, ಶ್ರೀನಿವಾಸ ತೀರ್ಥರು, ಜಮಖಂಡಿ ಗುರುರಾಜಾಚಾರ್ಯರು ಸಾಧನೆಗೈದ ಸ್ಥಾನ ಇದಾಗಿದೆ.

Advertisement

ಕ್ಷೇತ್ರದಲ್ಲಿ ಪ್ರತಿ ವರ್ಷ ವೈಶಾಖ ಶುದ್ಧ ಸಪ್ತಮಿಯಿಂದ ಉತ್ಸವ ಪ್ರಾರಂಭವಾಗಿ ವೈಶಾಖ ವದ್ಯ ದ್ವಿತಿಯಾವರೆಗೆ 9 ದಿನ ಅವ್ಯಾಹತವಾಗಿ ನಡೆಯುತ್ತವೆ. ಉತ್ಸವದ ಆ ದಿನಗಳಲ್ಲಿ ಪ್ರತಿನಿತ್ಯ ಬೆಳಗ್ಗೆ ಪಲ್ಲಕ್ಕಿ, ವಾಹನೋತ್ಸವ ನೆರವೇರುತ್ತದೆ. ವೈಶಾಖ ಶುದ್ಧ ಆಗಿ ಹುಣ್ಣಿಮೆಯಂದು ಲಕ್ಷ್ಮೀ ನರಸಿಂಹ ದೇವರ ರಥೋತ್ಸವ ನಡೆಯುತ್ತದೆ. ಭಾಗವತದಲ್ಲೂ ಈ ದೇವಾಲಯದ ಉಲ್ಲೇಖವಿದೆ. ಪುರಾಣ ಪ್ರಸಿದ್ಧ ಈ ದೇವಾಲಯದಲ್ಲಿ ಪ್ರತಿ ವರ್ಷ ಜಾತ್ಯೋತ್ಸವ, ಹೋಮ, ಹವನ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ನಡೆಯುತ್ತವೆ.

Advertisement

ಈ ಕ್ಷೇತ್ರದಲ್ಲಿ ಅನೇಕ ಪವಾಡಗಳು ನಡೆದಿದೆ. ವಿಜೃಂಭಣೆಯಿಂದ ನರಸಿಂಹ ಜಯಂತಿ ಆಚರಿಸಲಾಗುತ್ತದೆ. ಅಲ್ಲದೆ 8 ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಬೇರೆ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಬಂದು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಭಕ್ತರ ಇಷ್ಟಾರ್ಥಗಳು ನರಸಿಂಹ ಸ್ವಾಮಿ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ ಎಂದು ಭಕ್ತರಾದ ಜಯಶ್ರೀ ಶಾಮರಾವ್ ಮುಕಾಶಿ ಹೇಳುತ್ತಾರೆ.

ಈ ಸನ್ನಿಧಿಯಲ್ಲಿ ಸ್ವಾಮಿಯನ್ನು ಪ್ರಾರ್ಥಿಸಿ ಮಂತ್ರಾಕ್ಷತೆ ತೆಗೆದುಕೊಂಡು ಹೋದರೆ ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನೆರವೇರುತ್ತದೆ ಎಂದು ಹೇಳುತ್ತಾರೆ ಭಕ್ತೆ ಶೀಲಾ ರಮೇಶ್ ಉಮರ್ಜಿ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror