ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಪ್ರಖ್ಯಾತಿ ಪಡೆದಿರುತ್ತವೆ. ಅಂತಹ ದೇವಾಲಯಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶ್ರೀಕ್ಷೇತ್ರ ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯವೂ ಒಂದು.
ಸಾವಿರ ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಈ ಸನ್ನಿಧಿಯು ಭಕ್ತರ ಅಭಿಷ್ಠೆಗಳನ್ನು ಈಡೇರಿಸುವ ಮೂಲಕ ಇಂದಿಗೂ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದೆ. ಶುರ್ಪಾಲಿ ನರಸಿಂಹ ಸ್ವಾಮಿ ದೇವಾಲಯ 1000 ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಇಲ್ಲಿ ತಪೋನಿರತರಾದ ಉತ್ತರಾಧಿಮಠದ 1008 ವಿದ್ಯಾಧೀಶ ತೀರ್ಥ ಶ್ರೀಪಾದರು, 1008 ಸತ್ಯಪ್ರಮೋದತೀರ್ಥ ಶ್ರೀಪಾದಂಗಳವರು, ಇಂದಿನ ಪೀಠಾಧಿಪತಿಗಳಾದ 1008 ಸತ್ಯಾತ್ಮತೀರ್ಥ ಶ್ರೀಪಾದಂಗಳವರು, ಯಾದವಾರ್ಯರು, ಶ್ರೀನಿವಾಸ ತೀರ್ಥರು, ಜಮಖಂಡಿ ಗುರುರಾಜಾಚಾರ್ಯರು ಸಾಧನೆಗೈದ ಸ್ಥಾನ ಇದಾಗಿದೆ.
ಕ್ಷೇತ್ರದಲ್ಲಿ ಪ್ರತಿ ವರ್ಷ ವೈಶಾಖ ಶುದ್ಧ ಸಪ್ತಮಿಯಿಂದ ಉತ್ಸವ ಪ್ರಾರಂಭವಾಗಿ ವೈಶಾಖ ವದ್ಯ ದ್ವಿತಿಯಾವರೆಗೆ 9 ದಿನ ಅವ್ಯಾಹತವಾಗಿ ನಡೆಯುತ್ತವೆ. ಉತ್ಸವದ ಆ ದಿನಗಳಲ್ಲಿ ಪ್ರತಿನಿತ್ಯ ಬೆಳಗ್ಗೆ ಪಲ್ಲಕ್ಕಿ, ವಾಹನೋತ್ಸವ ನೆರವೇರುತ್ತದೆ. ವೈಶಾಖ ಶುದ್ಧ ಆಗಿ ಹುಣ್ಣಿಮೆಯಂದು ಲಕ್ಷ್ಮೀ ನರಸಿಂಹ ದೇವರ ರಥೋತ್ಸವ ನಡೆಯುತ್ತದೆ. ಭಾಗವತದಲ್ಲೂ ಈ ದೇವಾಲಯದ ಉಲ್ಲೇಖವಿದೆ. ಪುರಾಣ ಪ್ರಸಿದ್ಧ ಈ ದೇವಾಲಯದಲ್ಲಿ ಪ್ರತಿ ವರ್ಷ ಜಾತ್ಯೋತ್ಸವ, ಹೋಮ, ಹವನ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ನಡೆಯುತ್ತವೆ.
ಈ ಕ್ಷೇತ್ರದಲ್ಲಿ ಅನೇಕ ಪವಾಡಗಳು ನಡೆದಿದೆ. ವಿಜೃಂಭಣೆಯಿಂದ ನರಸಿಂಹ ಜಯಂತಿ ಆಚರಿಸಲಾಗುತ್ತದೆ. ಅಲ್ಲದೆ 8 ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಬೇರೆ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಬಂದು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಭಕ್ತರ ಇಷ್ಟಾರ್ಥಗಳು ನರಸಿಂಹ ಸ್ವಾಮಿ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ ಎಂದು ಭಕ್ತರಾದ ಜಯಶ್ರೀ ಶಾಮರಾವ್ ಮುಕಾಶಿ ಹೇಳುತ್ತಾರೆ.
ಈ ಸನ್ನಿಧಿಯಲ್ಲಿ ಸ್ವಾಮಿಯನ್ನು ಪ್ರಾರ್ಥಿಸಿ ಮಂತ್ರಾಕ್ಷತೆ ತೆಗೆದುಕೊಂಡು ಹೋದರೆ ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನೆರವೇರುತ್ತದೆ ಎಂದು ಹೇಳುತ್ತಾರೆ ಭಕ್ತೆ ಶೀಲಾ ರಮೇಶ್ ಉಮರ್ಜಿ.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…