MIRROR FOCUS

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಪ್ರಖ್ಯಾತಿ ಪಡೆದಿರುತ್ತವೆ. ಅಂತಹ ದೇವಾಲಯಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶ್ರೀಕ್ಷೇತ್ರ ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯವೂ ಒಂದು.

Advertisement
Advertisement

ಸಾವಿರ ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಈ ಸನ್ನಿಧಿಯು ಭಕ್ತರ ಅಭಿಷ್ಠೆಗಳನ್ನು ಈಡೇರಿಸುವ ಮೂಲಕ ಇಂದಿಗೂ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದೆ.   ಶುರ್ಪಾಲಿ ನರಸಿಂಹ ಸ್ವಾಮಿ ದೇವಾಲಯ 1000 ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಇಲ್ಲಿ ತಪೋನಿರತರಾದ ಉತ್ತರಾಧಿಮಠದ 1008 ವಿದ್ಯಾಧೀಶ ತೀರ್ಥ ಶ್ರೀಪಾದರು, 1008 ಸತ್ಯಪ್ರಮೋದತೀರ್ಥ ಶ್ರೀಪಾದಂಗಳವರು, ಇಂದಿನ ಪೀಠಾಧಿಪತಿಗಳಾದ 1008 ಸತ್ಯಾತ್ಮತೀರ್ಥ ಶ್ರೀಪಾದಂಗಳವರು, ಯಾದವಾರ್ಯರು, ಶ್ರೀನಿವಾಸ ತೀರ್ಥರು, ಜಮಖಂಡಿ ಗುರುರಾಜಾಚಾರ್ಯರು ಸಾಧನೆಗೈದ ಸ್ಥಾನ ಇದಾಗಿದೆ.

ಕ್ಷೇತ್ರದಲ್ಲಿ ಪ್ರತಿ ವರ್ಷ ವೈಶಾಖ ಶುದ್ಧ ಸಪ್ತಮಿಯಿಂದ ಉತ್ಸವ ಪ್ರಾರಂಭವಾಗಿ ವೈಶಾಖ ವದ್ಯ ದ್ವಿತಿಯಾವರೆಗೆ 9 ದಿನ ಅವ್ಯಾಹತವಾಗಿ ನಡೆಯುತ್ತವೆ. ಉತ್ಸವದ ಆ ದಿನಗಳಲ್ಲಿ ಪ್ರತಿನಿತ್ಯ ಬೆಳಗ್ಗೆ ಪಲ್ಲಕ್ಕಿ, ವಾಹನೋತ್ಸವ ನೆರವೇರುತ್ತದೆ. ವೈಶಾಖ ಶುದ್ಧ ಆಗಿ ಹುಣ್ಣಿಮೆಯಂದು ಲಕ್ಷ್ಮೀ ನರಸಿಂಹ ದೇವರ ರಥೋತ್ಸವ ನಡೆಯುತ್ತದೆ. ಭಾಗವತದಲ್ಲೂ ಈ ದೇವಾಲಯದ ಉಲ್ಲೇಖವಿದೆ. ಪುರಾಣ ಪ್ರಸಿದ್ಧ ಈ ದೇವಾಲಯದಲ್ಲಿ ಪ್ರತಿ ವರ್ಷ ಜಾತ್ಯೋತ್ಸವ, ಹೋಮ, ಹವನ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ನಡೆಯುತ್ತವೆ.

ಈ ಕ್ಷೇತ್ರದಲ್ಲಿ ಅನೇಕ ಪವಾಡಗಳು ನಡೆದಿದೆ. ವಿಜೃಂಭಣೆಯಿಂದ ನರಸಿಂಹ ಜಯಂತಿ ಆಚರಿಸಲಾಗುತ್ತದೆ. ಅಲ್ಲದೆ 8 ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಬೇರೆ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಬಂದು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಭಕ್ತರ ಇಷ್ಟಾರ್ಥಗಳು ನರಸಿಂಹ ಸ್ವಾಮಿ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ ಎಂದು ಭಕ್ತರಾದ ಜಯಶ್ರೀ ಶಾಮರಾವ್ ಮುಕಾಶಿ ಹೇಳುತ್ತಾರೆ.

Advertisement

ಈ ಸನ್ನಿಧಿಯಲ್ಲಿ ಸ್ವಾಮಿಯನ್ನು ಪ್ರಾರ್ಥಿಸಿ ಮಂತ್ರಾಕ್ಷತೆ ತೆಗೆದುಕೊಂಡು ಹೋದರೆ ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನೆರವೇರುತ್ತದೆ ಎಂದು ಹೇಳುತ್ತಾರೆ ಭಕ್ತೆ ಶೀಲಾ ರಮೇಶ್ ಉಮರ್ಜಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

4 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

4 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

5 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

5 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

5 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

5 hours ago