Advertisement
MIRROR FOCUS

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

Share

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಪ್ರಖ್ಯಾತಿ ಪಡೆದಿರುತ್ತವೆ. ಅಂತಹ ದೇವಾಲಯಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶ್ರೀಕ್ಷೇತ್ರ ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯವೂ ಒಂದು.

ಸಾವಿರ ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಈ ಸನ್ನಿಧಿಯು ಭಕ್ತರ ಅಭಿಷ್ಠೆಗಳನ್ನು ಈಡೇರಿಸುವ ಮೂಲಕ ಇಂದಿಗೂ ಜನಮಾನಸದಲ್ಲಿ ಅಜರಾಮರವಾಗಿ ಉಳಿದಿದೆ.   ಶುರ್ಪಾಲಿ ನರಸಿಂಹ ಸ್ವಾಮಿ ದೇವಾಲಯ 1000 ವರ್ಷಗಳ ಹಿಂದೆ ನಿರ್ಮಾಣವಾಗಿದೆ. ಇಲ್ಲಿ ತಪೋನಿರತರಾದ ಉತ್ತರಾಧಿಮಠದ 1008 ವಿದ್ಯಾಧೀಶ ತೀರ್ಥ ಶ್ರೀಪಾದರು, 1008 ಸತ್ಯಪ್ರಮೋದತೀರ್ಥ ಶ್ರೀಪಾದಂಗಳವರು, ಇಂದಿನ ಪೀಠಾಧಿಪತಿಗಳಾದ 1008 ಸತ್ಯಾತ್ಮತೀರ್ಥ ಶ್ರೀಪಾದಂಗಳವರು, ಯಾದವಾರ್ಯರು, ಶ್ರೀನಿವಾಸ ತೀರ್ಥರು, ಜಮಖಂಡಿ ಗುರುರಾಜಾಚಾರ್ಯರು ಸಾಧನೆಗೈದ ಸ್ಥಾನ ಇದಾಗಿದೆ.

ಕ್ಷೇತ್ರದಲ್ಲಿ ಪ್ರತಿ ವರ್ಷ ವೈಶಾಖ ಶುದ್ಧ ಸಪ್ತಮಿಯಿಂದ ಉತ್ಸವ ಪ್ರಾರಂಭವಾಗಿ ವೈಶಾಖ ವದ್ಯ ದ್ವಿತಿಯಾವರೆಗೆ 9 ದಿನ ಅವ್ಯಾಹತವಾಗಿ ನಡೆಯುತ್ತವೆ. ಉತ್ಸವದ ಆ ದಿನಗಳಲ್ಲಿ ಪ್ರತಿನಿತ್ಯ ಬೆಳಗ್ಗೆ ಪಲ್ಲಕ್ಕಿ, ವಾಹನೋತ್ಸವ ನೆರವೇರುತ್ತದೆ. ವೈಶಾಖ ಶುದ್ಧ ಆಗಿ ಹುಣ್ಣಿಮೆಯಂದು ಲಕ್ಷ್ಮೀ ನರಸಿಂಹ ದೇವರ ರಥೋತ್ಸವ ನಡೆಯುತ್ತದೆ. ಭಾಗವತದಲ್ಲೂ ಈ ದೇವಾಲಯದ ಉಲ್ಲೇಖವಿದೆ. ಪುರಾಣ ಪ್ರಸಿದ್ಧ ಈ ದೇವಾಲಯದಲ್ಲಿ ಪ್ರತಿ ವರ್ಷ ಜಾತ್ಯೋತ್ಸವ, ಹೋಮ, ಹವನ ಪೂಜಾ ಕೈಂಕರ್ಯಗಳು ವಿಜೃಂಭಣೆಯಿಂದ ನಡೆಯುತ್ತವೆ.

ಈ ಕ್ಷೇತ್ರದಲ್ಲಿ ಅನೇಕ ಪವಾಡಗಳು ನಡೆದಿದೆ. ವಿಜೃಂಭಣೆಯಿಂದ ನರಸಿಂಹ ಜಯಂತಿ ಆಚರಿಸಲಾಗುತ್ತದೆ. ಅಲ್ಲದೆ 8 ದಿನಗಳ ಕಾಲ ಜಾತ್ರೆ ನಡೆಯುತ್ತದೆ. ಬೇರೆ ರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಬಂದು ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಭಕ್ತರ ಇಷ್ಟಾರ್ಥಗಳು ನರಸಿಂಹ ಸ್ವಾಮಿ ಈಡೇರಿಸುತ್ತಾನೆ ಎಂಬ ನಂಬಿಕೆ ಇದೆ ಎಂದು ಭಕ್ತರಾದ ಜಯಶ್ರೀ ಶಾಮರಾವ್ ಮುಕಾಶಿ ಹೇಳುತ್ತಾರೆ.

ಈ ಸನ್ನಿಧಿಯಲ್ಲಿ ಸ್ವಾಮಿಯನ್ನು ಪ್ರಾರ್ಥಿಸಿ ಮಂತ್ರಾಕ್ಷತೆ ತೆಗೆದುಕೊಂಡು ಹೋದರೆ ಮನಸ್ಸಿನಲ್ಲಿ ಅಂದುಕೊಂಡ ಕೆಲಸ ನೆರವೇರುತ್ತದೆ ಎಂದು ಹೇಳುತ್ತಾರೆ ಭಕ್ತೆ ಶೀಲಾ ರಮೇಶ್ ಉಮರ್ಜಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

15 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

22 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago