ಶ್ರೀಲಂಕಾದಲ್ಲಿ ಕಾಗದದ ಕೊರತೆಯಿಂದ ಶಾಲಾ ಮಕ್ಕಳ ವಾರ್ಷಿಕ ಪರೀಕ್ಷೆಯನ್ನೇ ಮುಂದೂಡಲಾಗಿರುವ ಘಟನೆ ವರದಿಯಾಗಿದೆ.
ಶ್ರೀಲಂಕಾದಲ್ಲಿ ದೊಡ್ಡ ಆರ್ಥಿಕ ಮುಗ್ಗಟ್ಟು ಕಾಣಿಸಿಕೊಂಡಿದ್ದು, ವಿದೇಶಿ ವಿನಿಮಯ ಪಾವತಿ ಕೊರತೆಯಿಂದ ಕಾಗದವನ್ನು ಆಮದು ಮಾಡಿಕೊಳ್ಳಲಾಗುತ್ತಿಲ್ಲ. ಇದರಿಂದ ಪರೀಕ್ಷೆ ಬರೆದು ಮುಂದಿನ ತರಗತಿಗೆ ಹೋಗಬೇಕಿದ್ದ ಲಕ್ಷಾಂತರ ಮಕ್ಕಳು ತೊಂದರೆಗೆ ಸಿಲುಕಿಕೊಂಡಿದ್ದಾರೆ.
ಶ್ರೀಲಂಕಾದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸೋಮವಾರದಿಂದ ವಾರ್ಷಿಕ ಪರೀಕ್ಷೆಗಳನ್ನು ಅಣಿಗೊಳಿಸಿತ್ತು. ಆದರೆ, ಕಾಗದದ ಕೊರತೆಯಿಂದ ಅನಿರ್ದಿಷ್ಟಾವಧಿಯವರಿಗೆ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




