ಹಳದಿ ಎಲೆರೋಗ, ಎಲೆಚುಕ್ಕಿ ರೋಗ | ಅಡಿಕೆ ಬೆಳೆಗಾರರೇ ಆತ್ಮಹತ್ಯೆ ಪರಿಹಾರವಲ್ಲ |

November 10, 2022
10:35 PM

ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.

ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್  ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಭಾಗದ ಬಹುತೇಕ ಅಡಿಕೆ ತೋಟಗಳನ್ನು ಎಲೆಚುಕ್ಕಿ ರೋಗ ಆವರಿಸಿದ್ದು, ದಿನೇ ದಿನೇ ರೋಗಬಾಧೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ರೈತರು ಆತಂಕಕ್ಕೆ ಸಿಲುಕಿದ್ದು ಪರಿಹಾರ ಕ್ರಮಗಳು ಕಾಣದೇ ಇರುವುದರಿಂದ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror