ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.
ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್ ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಭಾಗದ ಬಹುತೇಕ ಅಡಿಕೆ ತೋಟಗಳನ್ನು ಎಲೆಚುಕ್ಕಿ ರೋಗ ಆವರಿಸಿದ್ದು, ದಿನೇ ದಿನೇ ರೋಗಬಾಧೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ರೈತರು ಆತಂಕಕ್ಕೆ ಸಿಲುಕಿದ್ದು ಪರಿಹಾರ ಕ್ರಮಗಳು ಕಾಣದೇ ಇರುವುದರಿಂದ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…