ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಕಾರಣದಿಂದ ಅಡಿಕೆ ಫಸಲು ನಾಶದ ಭಯದಿಂದ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಮತ್ತೊಬ್ಬ ಯುವ ಕೃಷಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಎರಡನೇ ಪ್ರಕರಣ ದಾಖಲಾಗಿದೆ.
ಎಲೆಚುಕ್ಕಿ ರೋಗ, ಹಳದಿ ಎಲೆರೋಗ ಬಾಧೆಗಳು ಕಾಡುತ್ತಿದ್ದು, ಫಲಸು ನಾಶವಾಗಿದ್ದು, ಕೃಷಿಗಾಗಿ ಸಾಲ ಮಾಡಿಕೊಂಡಿದ್ದ ಯುವ ಕೃಷಿಕ ಮಾನಸಿಕವಾಗಿ ಕುಗ್ಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅಭಿಲಾಷ್ ಆತ್ಮಹತ್ಯೆಗೆ ಶರಣಾದ ಯುವಕ. ಕೃಷಿಗಾಗಿ ಸುಮಾರ 3 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ತೋಟವನ್ನು ಸಂಪೂರ್ಣವಾಗಿ ರೋಗ ಬಾಧಿಸಿರುವುದರಿಂದ ಕಂಗಾಲಾದ ಅಭಿಲಾಷ್ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಭಾಗದ ಬಹುತೇಕ ಅಡಿಕೆ ತೋಟಗಳನ್ನು ಎಲೆಚುಕ್ಕಿ ರೋಗ ಆವರಿಸಿದ್ದು, ದಿನೇ ದಿನೇ ರೋಗಬಾಧೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ರೈತರು ಆತಂಕಕ್ಕೆ ಸಿಲುಕಿದ್ದು ಪರಿಹಾರ ಕ್ರಮಗಳು ಕಾಣದೇ ಇರುವುದರಿಂದ ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ.ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…