ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ  ಶ್ರೀನಿವಾಸ ಕಲ್ಯಾಣೋತ್ಸವ | ಅಪೂರ್ವವಾದ ಕಾರ್ಯಕ್ರಮಕ್ಕೆ ಸಿದ್ಧತೆ |

November 20, 2023
9:05 PM
ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.
ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣಮಂಟಪದಲ್ಲಿ  ನಡೆಯಿತು. 
ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಮಾತನಾಡಿ ,  ಡಿ.24 ರ ಸಂಜೆ ಬೊಳುವಾರಿನಿಂದ ತಿರುಪತಿಯಿಂದ ಆಗಮಿಸುವ ದೇವರ  ವೈಭವದ ಮೆರವಣಿಗೆ , ನಂತರ ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ , ನಂತರ ರಾಮಕೃಷ್ಣ ಕಾಟುಕುಕ್ಕೆ ಅವರಿಂದ ಭಜನೋತ್ಸವ ಸಂಜೆ ಬೃಹತ್ ಸಂತ ಸಮ್ಮೇಳನ ನಡೆಯಲಿದೆ.  ಸಭೆಯ ನಂತರ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಎರಡು ದಿನದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಅಂದಾಜು 1 ಲಕ್ಷಕ್ಕೂ ಅಧಿಕ  ಜನ ಸೇರಲಿದ್ದು,  ಎರಡು ದಿನವು ಅನ್ನದಾನ ಇರಲಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆ ನಡೆಯಿತು.
ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ,  ಶ್ರೀನಿವಾಸ ಕಲ್ಯಾಣೋತ್ಸವದ ಅಧ್ಯಕ್ಷರಾದ ಶಶಾಂಕ್ ಕೊಟೇಚಾ,  ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಿಕಾ ಪ್ರಸಾದ್,  ಗಣೇಶ್ ಭಟ್ ಮಕರಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಕಾರ್ಯಕ್ರಮ ನಿರೂಪಿಸಿದರು

Advertisement
Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |
April 1, 2025
8:00 AM
by: The Rural Mirror ಸುದ್ದಿಜಾಲ
ವೃಶ್ಚಿಕ ರಾಶಿ ಯುಗಾದಿ ಸಂವತ್ಸರದ ಫಲಗಳು | ಹೇಗಿದೆ ಈ ವರ್ಷ..?
April 1, 2025
7:32 AM
by: ದ ರೂರಲ್ ಮಿರರ್.ಕಾಂ
ದೇವಸ್ಥಾನದ ಬ್ರಹ್ಮಕಲಶೋತ್ಸವಗಳಲ್ಲಿ “ರಾಜಕೀಯದ ಚಪ್ಪಲು” ಹೊರಗಿಡಬೇಕು |
April 1, 2025
7:23 AM
by: ಮಹೇಶ್ ಪುಚ್ಚಪ್ಪಾಡಿ
ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group