ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ  ಶ್ರೀನಿವಾಸ ಕಲ್ಯಾಣೋತ್ಸವ | ಅಪೂರ್ವವಾದ ಕಾರ್ಯಕ್ರಮಕ್ಕೆ ಸಿದ್ಧತೆ |

November 20, 2023
9:05 PM
ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.
ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರ ಕಲ್ಯಾಣಮಂಟಪದಲ್ಲಿ  ನಡೆಯಿತು. 
ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಮಾತನಾಡಿ ,  ಡಿ.24 ರ ಸಂಜೆ ಬೊಳುವಾರಿನಿಂದ ತಿರುಪತಿಯಿಂದ ಆಗಮಿಸುವ ದೇವರ  ವೈಭವದ ಮೆರವಣಿಗೆ , ನಂತರ ರಾತ್ರಿ ಪೂಜೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ , ನಂತರ ರಾಮಕೃಷ್ಣ ಕಾಟುಕುಕ್ಕೆ ಅವರಿಂದ ಭಜನೋತ್ಸವ ಸಂಜೆ ಬೃಹತ್ ಸಂತ ಸಮ್ಮೇಳನ ನಡೆಯಲಿದೆ.  ಸಭೆಯ ನಂತರ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಎರಡು ದಿನದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಅಂದಾಜು 1 ಲಕ್ಷಕ್ಕೂ ಅಧಿಕ  ಜನ ಸೇರಲಿದ್ದು,  ಎರಡು ದಿನವು ಅನ್ನದಾನ ಇರಲಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆ ನಡೆಯಿತು.
ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ,  ಶ್ರೀನಿವಾಸ ಕಲ್ಯಾಣೋತ್ಸವದ ಅಧ್ಯಕ್ಷರಾದ ಶಶಾಂಕ್ ಕೊಟೇಚಾ,  ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಿಕಾ ಪ್ರಸಾದ್,  ಗಣೇಶ್ ಭಟ್ ಮಕರಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಕಾರ್ಯಕ್ರಮ ನಿರೂಪಿಸಿದರು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror