ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಕೌನ್ಸಿಲ್ – ನವ ಸಾರಥ್ಯ

January 18, 2021
7:19 PM

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಕೌನ್ಸಿಲ್ ಮಹಾಸಭೆ ಜ. 17ರಂದು ನೆಕ್ಕಿಲ ಮದರಸಾ ಹಾಲ್ ನಲ್ಲಿ ಡಿವಿಷನ್ ಸಮಿತಿ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಂಜದಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಎಸ್ಸೆಸ್ಸೆಫ್ ದ.ಕ ಈಸ್ಟ್ ಝೋನ್ ಸದಸ್ಯ ಜುನೈದ್ ಸಖಾಫಿ ಜೀರ್ಮುಖಿ ದುಆ ನೆರವೇರಿಸಿ, ಎಸ್.ಎಂ.ಎ ಸುಳ್ಯ ರೀಜನಲ್ ಪ್ರ. ಕಾರ್ಯದರ್ಶಿ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು.

ನೆಕ್ಕಿಲ ಜುಮಾ ಮಸ್ಜಿದ್ ಮುದರ್ರಿಸ್ ಝಿಯಾದ್ ಸಖಾಫಿ ಬಾರೆಬೆಟ್ಟು ಸಂಘಟನಾ ತರಬೇತಿ ನಡೆಸಿದರು. ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ದ.ಕ. ಈಸ್ಟ್ ಝೋನ್ ಸದಸ್ಯ ಅಬ್ದುರ್ರಹ್ಮಾನ್ ಪದ್ಮುಂಜ ಕೌನ್ಸಿಲ್ ನಿಯಂತ್ರಿಸಿದರು. ಪ್ರ.ಕಾರ್ಯದರ್ಶಿ ಸಿರಾಜುದ್ದೀನ್ ಹಿಮಮಿ ಕುಂಭಕ್ಕೋಡು ವರದಿ ಹಾಗೂ ಕೋಶಾಧಿಕಾರಿ ಹಸೈನಾರ್ ನೆಕ್ಕಿಲ ಲೆಕ್ಕ ಪತ್ರ ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷ ಹಸೈನಾರ್ ಅಮಾನಿ, ಎಸ್.ವೈ.ಎಸ್ ದ.ಕ.ಈಸ್ಟ್ ಜಿಲ್ಲಾ ಸದಸ್ಯ ಸಿದ್ದೀಖ್ ಕಟ್ಟೆಕಾರ್, ಎಸ್.ವೈ.ಎಸ್ ನೆಕ್ಕಿಲ ಬ್ರಾಂಚ್ ಅಧ್ಯಕ್ಷ ರಫೀಖ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಕಾರ್ಯದರ್ಶಿ ಎ.ಬಿ. ಅಬ್ಬಾಸ್ ಹಾಗೂ ನೆಕ್ಕಿಲ ಜಮಾಅತ್ ನಾಯಕರು ಉಪಸ್ಥಿತರಿದ್ದರು.

ನೂತನ ಸಮಿತಿಯ ಅಧ್ಯಕ್ಷರಾಗಿ ಎ.ಎಂ.ಫೈಝಲ್ ಝುಹ್’ರಿ ಕಲ್ಲುಗುಂಡಿ, ಪ್ರ. ಕಾರ್ಯದರ್ಶಿಯಾಗಿ ಹಸೈನಾರ್ ನೆಕ್ಕಿಲ, ಕೋಶಾಧಿಕಾರಿ ಅಬ್ದುರ್ರಹ್ಮಾನ್ ಸಖಾಫಿ ತಂಬಿನಮಕ್ಕಿ, ಉಪಾಧ್ಯಕ್ಷರುಗಳಾಗಿ ಸಿರಾಜ್ ಹಿಮಮಿ ಕುಂಭಕ್ಕೋಡು, ಜುನೈದ್ ಸಖಾಫಿ ಜೀರ್ಮುಖಿ ಯವರನ್ನೂ, ಕಾರ್ಯದರ್ಶಿಗಳಾಗಿ ಖಲೀಲ್ ಝುಹ್ರಿ, ನೌಶಾದ್ ಕೆರೆಮೂಲೆ, ಸ್ವಬಾಹ್ ಹಿಮಮಿ, ಸ್ವಾದಿಖ್ ಕಲ್ಲುಗುಂಡಿ, ಕಲಾಂ ಝುಹ್ರಿ, ಶಮೀರ್ ಡಿ.ಎಚ್ ರವರೊಂದಿಗೆ 14 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.

ಪ್ರ. ಕಾರ್ಯದರ್ಶಿ ಸಿರಾಜ್ ಹಿಮಮಿ ಸ್ವಾಗತಿಸಿ ನೂತನ ಪ್ರ. ಕಾರ್ಯದರ್ಶಿ ಹಸೈನಾರ್ ನೆಕ್ಕಿಲ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror