Advertisement
ಸುದ್ದಿಗಳು

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ವಾರ್ಷಿಕ ಕೌನ್ಸಿಲ್ – ನವ ಸಾರಥ್ಯ

Share

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಕೌನ್ಸಿಲ್ ಮಹಾಸಭೆ ಜ. 17ರಂದು ನೆಕ್ಕಿಲ ಮದರಸಾ ಹಾಲ್ ನಲ್ಲಿ ಡಿವಿಷನ್ ಸಮಿತಿ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಂಜದಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಎಸ್ಸೆಸ್ಸೆಫ್ ದ.ಕ ಈಸ್ಟ್ ಝೋನ್ ಸದಸ್ಯ ಜುನೈದ್ ಸಖಾಫಿ ಜೀರ್ಮುಖಿ ದುಆ ನೆರವೇರಿಸಿ, ಎಸ್.ಎಂ.ಎ ಸುಳ್ಯ ರೀಜನಲ್ ಪ್ರ. ಕಾರ್ಯದರ್ಶಿ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು.

ನೆಕ್ಕಿಲ ಜುಮಾ ಮಸ್ಜಿದ್ ಮುದರ್ರಿಸ್ ಝಿಯಾದ್ ಸಖಾಫಿ ಬಾರೆಬೆಟ್ಟು ಸಂಘಟನಾ ತರಬೇತಿ ನಡೆಸಿದರು. ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ದ.ಕ. ಈಸ್ಟ್ ಝೋನ್ ಸದಸ್ಯ ಅಬ್ದುರ್ರಹ್ಮಾನ್ ಪದ್ಮುಂಜ ಕೌನ್ಸಿಲ್ ನಿಯಂತ್ರಿಸಿದರು. ಪ್ರ.ಕಾರ್ಯದರ್ಶಿ ಸಿರಾಜುದ್ದೀನ್ ಹಿಮಮಿ ಕುಂಭಕ್ಕೋಡು ವರದಿ ಹಾಗೂ ಕೋಶಾಧಿಕಾರಿ ಹಸೈನಾರ್ ನೆಕ್ಕಿಲ ಲೆಕ್ಕ ಪತ್ರ ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷ ಹಸೈನಾರ್ ಅಮಾನಿ, ಎಸ್.ವೈ.ಎಸ್ ದ.ಕ.ಈಸ್ಟ್ ಜಿಲ್ಲಾ ಸದಸ್ಯ ಸಿದ್ದೀಖ್ ಕಟ್ಟೆಕಾರ್, ಎಸ್.ವೈ.ಎಸ್ ನೆಕ್ಕಿಲ ಬ್ರಾಂಚ್ ಅಧ್ಯಕ್ಷ ರಫೀಖ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಕಾರ್ಯದರ್ಶಿ ಎ.ಬಿ. ಅಬ್ಬಾಸ್ ಹಾಗೂ ನೆಕ್ಕಿಲ ಜಮಾಅತ್ ನಾಯಕರು ಉಪಸ್ಥಿತರಿದ್ದರು.

ನೂತನ ಸಮಿತಿಯ ಅಧ್ಯಕ್ಷರಾಗಿ ಎ.ಎಂ.ಫೈಝಲ್ ಝುಹ್’ರಿ ಕಲ್ಲುಗುಂಡಿ, ಪ್ರ. ಕಾರ್ಯದರ್ಶಿಯಾಗಿ ಹಸೈನಾರ್ ನೆಕ್ಕಿಲ, ಕೋಶಾಧಿಕಾರಿ ಅಬ್ದುರ್ರಹ್ಮಾನ್ ಸಖಾಫಿ ತಂಬಿನಮಕ್ಕಿ, ಉಪಾಧ್ಯಕ್ಷರುಗಳಾಗಿ ಸಿರಾಜ್ ಹಿಮಮಿ ಕುಂಭಕ್ಕೋಡು, ಜುನೈದ್ ಸಖಾಫಿ ಜೀರ್ಮುಖಿ ಯವರನ್ನೂ, ಕಾರ್ಯದರ್ಶಿಗಳಾಗಿ ಖಲೀಲ್ ಝುಹ್ರಿ, ನೌಶಾದ್ ಕೆರೆಮೂಲೆ, ಸ್ವಬಾಹ್ ಹಿಮಮಿ, ಸ್ವಾದಿಖ್ ಕಲ್ಲುಗುಂಡಿ, ಕಲಾಂ ಝುಹ್ರಿ, ಶಮೀರ್ ಡಿ.ಎಚ್ ರವರೊಂದಿಗೆ 14 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.

ಪ್ರ. ಕಾರ್ಯದರ್ಶಿ ಸಿರಾಜ್ ಹಿಮಮಿ ಸ್ವಾಗತಿಸಿ ನೂತನ ಪ್ರ. ಕಾರ್ಯದರ್ಶಿ ಹಸೈನಾರ್ ನೆಕ್ಕಿಲ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

17 hours ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

21 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

21 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

1 day ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

2 days ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

3 days ago