ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಕೌನ್ಸಿಲ್ ಮಹಾಸಭೆ ಜ. 17ರಂದು ನೆಕ್ಕಿಲ ಮದರಸಾ ಹಾಲ್ ನಲ್ಲಿ ಡಿವಿಷನ್ ಸಮಿತಿ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಂಜದಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಎಸ್ಸೆಸ್ಸೆಫ್ ದ.ಕ ಈಸ್ಟ್ ಝೋನ್ ಸದಸ್ಯ ಜುನೈದ್ ಸಖಾಫಿ ಜೀರ್ಮುಖಿ ದುಆ ನೆರವೇರಿಸಿ, ಎಸ್.ಎಂ.ಎ ಸುಳ್ಯ ರೀಜನಲ್ ಪ್ರ. ಕಾರ್ಯದರ್ಶಿ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು.
ನೆಕ್ಕಿಲ ಜುಮಾ ಮಸ್ಜಿದ್ ಮುದರ್ರಿಸ್ ಝಿಯಾದ್ ಸಖಾಫಿ ಬಾರೆಬೆಟ್ಟು ಸಂಘಟನಾ ತರಬೇತಿ ನಡೆಸಿದರು. ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ದ.ಕ. ಈಸ್ಟ್ ಝೋನ್ ಸದಸ್ಯ ಅಬ್ದುರ್ರಹ್ಮಾನ್ ಪದ್ಮುಂಜ ಕೌನ್ಸಿಲ್ ನಿಯಂತ್ರಿಸಿದರು. ಪ್ರ.ಕಾರ್ಯದರ್ಶಿ ಸಿರಾಜುದ್ದೀನ್ ಹಿಮಮಿ ಕುಂಭಕ್ಕೋಡು ವರದಿ ಹಾಗೂ ಕೋಶಾಧಿಕಾರಿ ಹಸೈನಾರ್ ನೆಕ್ಕಿಲ ಲೆಕ್ಕ ಪತ್ರ ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷ ಹಸೈನಾರ್ ಅಮಾನಿ, ಎಸ್.ವೈ.ಎಸ್ ದ.ಕ.ಈಸ್ಟ್ ಜಿಲ್ಲಾ ಸದಸ್ಯ ಸಿದ್ದೀಖ್ ಕಟ್ಟೆಕಾರ್, ಎಸ್.ವೈ.ಎಸ್ ನೆಕ್ಕಿಲ ಬ್ರಾಂಚ್ ಅಧ್ಯಕ್ಷ ರಫೀಖ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಕಾರ್ಯದರ್ಶಿ ಎ.ಬಿ. ಅಬ್ಬಾಸ್ ಹಾಗೂ ನೆಕ್ಕಿಲ ಜಮಾಅತ್ ನಾಯಕರು ಉಪಸ್ಥಿತರಿದ್ದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಎ.ಎಂ.ಫೈಝಲ್ ಝುಹ್’ರಿ ಕಲ್ಲುಗುಂಡಿ, ಪ್ರ. ಕಾರ್ಯದರ್ಶಿಯಾಗಿ ಹಸೈನಾರ್ ನೆಕ್ಕಿಲ, ಕೋಶಾಧಿಕಾರಿ ಅಬ್ದುರ್ರಹ್ಮಾನ್ ಸಖಾಫಿ ತಂಬಿನಮಕ್ಕಿ, ಉಪಾಧ್ಯಕ್ಷರುಗಳಾಗಿ ಸಿರಾಜ್ ಹಿಮಮಿ ಕುಂಭಕ್ಕೋಡು, ಜುನೈದ್ ಸಖಾಫಿ ಜೀರ್ಮುಖಿ ಯವರನ್ನೂ, ಕಾರ್ಯದರ್ಶಿಗಳಾಗಿ ಖಲೀಲ್ ಝುಹ್ರಿ, ನೌಶಾದ್ ಕೆರೆಮೂಲೆ, ಸ್ವಬಾಹ್ ಹಿಮಮಿ, ಸ್ವಾದಿಖ್ ಕಲ್ಲುಗುಂಡಿ, ಕಲಾಂ ಝುಹ್ರಿ, ಶಮೀರ್ ಡಿ.ಎಚ್ ರವರೊಂದಿಗೆ 14 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.
ಪ್ರ. ಕಾರ್ಯದರ್ಶಿ ಸಿರಾಜ್ ಹಿಮಮಿ ಸ್ವಾಗತಿಸಿ ನೂತನ ಪ್ರ. ಕಾರ್ಯದರ್ಶಿ ಹಸೈನಾರ್ ನೆಕ್ಕಿಲ ವಂದಿಸಿದರು.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…