ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಕೌನ್ಸಿಲ್ ಮಹಾಸಭೆ ಜ. 17ರಂದು ನೆಕ್ಕಿಲ ಮದರಸಾ ಹಾಲ್ ನಲ್ಲಿ ಡಿವಿಷನ್ ಸಮಿತಿ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಂಜದಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಎಸ್ಸೆಸ್ಸೆಫ್ ದ.ಕ ಈಸ್ಟ್ ಝೋನ್ ಸದಸ್ಯ ಜುನೈದ್ ಸಖಾಫಿ ಜೀರ್ಮುಖಿ ದುಆ ನೆರವೇರಿಸಿ, ಎಸ್.ಎಂ.ಎ ಸುಳ್ಯ ರೀಜನಲ್ ಪ್ರ. ಕಾರ್ಯದರ್ಶಿ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು.
ನೆಕ್ಕಿಲ ಜುಮಾ ಮಸ್ಜಿದ್ ಮುದರ್ರಿಸ್ ಝಿಯಾದ್ ಸಖಾಫಿ ಬಾರೆಬೆಟ್ಟು ಸಂಘಟನಾ ತರಬೇತಿ ನಡೆಸಿದರು. ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ದ.ಕ. ಈಸ್ಟ್ ಝೋನ್ ಸದಸ್ಯ ಅಬ್ದುರ್ರಹ್ಮಾನ್ ಪದ್ಮುಂಜ ಕೌನ್ಸಿಲ್ ನಿಯಂತ್ರಿಸಿದರು. ಪ್ರ.ಕಾರ್ಯದರ್ಶಿ ಸಿರಾಜುದ್ದೀನ್ ಹಿಮಮಿ ಕುಂಭಕ್ಕೋಡು ವರದಿ ಹಾಗೂ ಕೋಶಾಧಿಕಾರಿ ಹಸೈನಾರ್ ನೆಕ್ಕಿಲ ಲೆಕ್ಕ ಪತ್ರ ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷ ಹಸೈನಾರ್ ಅಮಾನಿ, ಎಸ್.ವೈ.ಎಸ್ ದ.ಕ.ಈಸ್ಟ್ ಜಿಲ್ಲಾ ಸದಸ್ಯ ಸಿದ್ದೀಖ್ ಕಟ್ಟೆಕಾರ್, ಎಸ್.ವೈ.ಎಸ್ ನೆಕ್ಕಿಲ ಬ್ರಾಂಚ್ ಅಧ್ಯಕ್ಷ ರಫೀಖ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಕಾರ್ಯದರ್ಶಿ ಎ.ಬಿ. ಅಬ್ಬಾಸ್ ಹಾಗೂ ನೆಕ್ಕಿಲ ಜಮಾಅತ್ ನಾಯಕರು ಉಪಸ್ಥಿತರಿದ್ದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಎ.ಎಂ.ಫೈಝಲ್ ಝುಹ್’ರಿ ಕಲ್ಲುಗುಂಡಿ, ಪ್ರ. ಕಾರ್ಯದರ್ಶಿಯಾಗಿ ಹಸೈನಾರ್ ನೆಕ್ಕಿಲ, ಕೋಶಾಧಿಕಾರಿ ಅಬ್ದುರ್ರಹ್ಮಾನ್ ಸಖಾಫಿ ತಂಬಿನಮಕ್ಕಿ, ಉಪಾಧ್ಯಕ್ಷರುಗಳಾಗಿ ಸಿರಾಜ್ ಹಿಮಮಿ ಕುಂಭಕ್ಕೋಡು, ಜುನೈದ್ ಸಖಾಫಿ ಜೀರ್ಮುಖಿ ಯವರನ್ನೂ, ಕಾರ್ಯದರ್ಶಿಗಳಾಗಿ ಖಲೀಲ್ ಝುಹ್ರಿ, ನೌಶಾದ್ ಕೆರೆಮೂಲೆ, ಸ್ವಬಾಹ್ ಹಿಮಮಿ, ಸ್ವಾದಿಖ್ ಕಲ್ಲುಗುಂಡಿ, ಕಲಾಂ ಝುಹ್ರಿ, ಶಮೀರ್ ಡಿ.ಎಚ್ ರವರೊಂದಿಗೆ 14 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.
ಪ್ರ. ಕಾರ್ಯದರ್ಶಿ ಸಿರಾಜ್ ಹಿಮಮಿ ಸ್ವಾಗತಿಸಿ ನೂತನ ಪ್ರ. ಕಾರ್ಯದರ್ಶಿ ಹಸೈನಾರ್ ನೆಕ್ಕಿಲ ವಂದಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…