ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಕೌನ್ಸಿಲ್ ಮಹಾಸಭೆ ಜ. 17ರಂದು ನೆಕ್ಕಿಲ ಮದರಸಾ ಹಾಲ್ ನಲ್ಲಿ ಡಿವಿಷನ್ ಸಮಿತಿ ಅಧ್ಯಕ್ಷ ಜಿ.ಕೆ ಇಬ್ರಾಹಿಂ ಅಂಜದಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಎಸ್ಸೆಸ್ಸೆಫ್ ದ.ಕ ಈಸ್ಟ್ ಝೋನ್ ಸದಸ್ಯ ಜುನೈದ್ ಸಖಾಫಿ ಜೀರ್ಮುಖಿ ದುಆ ನೆರವೇರಿಸಿ, ಎಸ್.ಎಂ.ಎ ಸುಳ್ಯ ರೀಜನಲ್ ಪ್ರ. ಕಾರ್ಯದರ್ಶಿ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು.
ನೆಕ್ಕಿಲ ಜುಮಾ ಮಸ್ಜಿದ್ ಮುದರ್ರಿಸ್ ಝಿಯಾದ್ ಸಖಾಫಿ ಬಾರೆಬೆಟ್ಟು ಸಂಘಟನಾ ತರಬೇತಿ ನಡೆಸಿದರು. ವೀಕ್ಷಕರಾಗಿ ಆಗಮಿಸಿದ ಎಸ್ಸೆಸ್ಸೆಫ್ ದ.ಕ. ಈಸ್ಟ್ ಝೋನ್ ಸದಸ್ಯ ಅಬ್ದುರ್ರಹ್ಮಾನ್ ಪದ್ಮುಂಜ ಕೌನ್ಸಿಲ್ ನಿಯಂತ್ರಿಸಿದರು. ಪ್ರ.ಕಾರ್ಯದರ್ಶಿ ಸಿರಾಜುದ್ದೀನ್ ಹಿಮಮಿ ಕುಂಭಕ್ಕೋಡು ವರದಿ ಹಾಗೂ ಕೋಶಾಧಿಕಾರಿ ಹಸೈನಾರ್ ನೆಕ್ಕಿಲ ಲೆಕ್ಕ ಪತ್ರ ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಕೆ.ಸಿ.ಎಫ್ ಅಬುಧಾಬಿ ಝೋನ್ ಅಧ್ಯಕ್ಷ ಹಸೈನಾರ್ ಅಮಾನಿ, ಎಸ್.ವೈ.ಎಸ್ ದ.ಕ.ಈಸ್ಟ್ ಜಿಲ್ಲಾ ಸದಸ್ಯ ಸಿದ್ದೀಖ್ ಕಟ್ಟೆಕಾರ್, ಎಸ್.ವೈ.ಎಸ್ ನೆಕ್ಕಿಲ ಬ್ರಾಂಚ್ ಅಧ್ಯಕ್ಷ ರಫೀಖ್, ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಾಜಿ ಕಾರ್ಯದರ್ಶಿ ಎ.ಬಿ. ಅಬ್ಬಾಸ್ ಹಾಗೂ ನೆಕ್ಕಿಲ ಜಮಾಅತ್ ನಾಯಕರು ಉಪಸ್ಥಿತರಿದ್ದರು.
ನೂತನ ಸಮಿತಿಯ ಅಧ್ಯಕ್ಷರಾಗಿ ಎ.ಎಂ.ಫೈಝಲ್ ಝುಹ್’ರಿ ಕಲ್ಲುಗುಂಡಿ, ಪ್ರ. ಕಾರ್ಯದರ್ಶಿಯಾಗಿ ಹಸೈನಾರ್ ನೆಕ್ಕಿಲ, ಕೋಶಾಧಿಕಾರಿ ಅಬ್ದುರ್ರಹ್ಮಾನ್ ಸಖಾಫಿ ತಂಬಿನಮಕ್ಕಿ, ಉಪಾಧ್ಯಕ್ಷರುಗಳಾಗಿ ಸಿರಾಜ್ ಹಿಮಮಿ ಕುಂಭಕ್ಕೋಡು, ಜುನೈದ್ ಸಖಾಫಿ ಜೀರ್ಮುಖಿ ಯವರನ್ನೂ, ಕಾರ್ಯದರ್ಶಿಗಳಾಗಿ ಖಲೀಲ್ ಝುಹ್ರಿ, ನೌಶಾದ್ ಕೆರೆಮೂಲೆ, ಸ್ವಬಾಹ್ ಹಿಮಮಿ, ಸ್ವಾದಿಖ್ ಕಲ್ಲುಗುಂಡಿ, ಕಲಾಂ ಝುಹ್ರಿ, ಶಮೀರ್ ಡಿ.ಎಚ್ ರವರೊಂದಿಗೆ 14 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.
ಪ್ರ. ಕಾರ್ಯದರ್ಶಿ ಸಿರಾಜ್ ಹಿಮಮಿ ಸ್ವಾಗತಿಸಿ ನೂತನ ಪ್ರ. ಕಾರ್ಯದರ್ಶಿ ಹಸೈನಾರ್ ನೆಕ್ಕಿಲ ವಂದಿಸಿದರು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…