Advertisement
ಸುದ್ದಿಗಳು

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ | 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ನೋಂದಣಿ..!

Share

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲಾದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ನಡುವೆಯೂ ಏಪ್ರಿಲ್ 15 ರವರೆಗೂ ನಡೆಯಲಿರುವ  ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಈ ಬಾರಿ 5,833 ಸರ್ಕಾರಿ ಶಾಲೆ ವಿದ್ಯಾರ್ಥಿಗಳು  3,605 ಅನುದಾನಿತ,  6,060 ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೇ  8.42 ಲಕ್ಷ ವಿದ್ಯಾರ್ಥಿಗಳು ಪರಿಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷೆ ಆರಂಭದ ದಿನವಾದ ಶುಕ್ರವಾರ  ಬೆಳಗ್ಗೆ 10-30 ರಿಂದ ಮಧ್ಯಾಹ್ನ 1-45ರವರೆಗೆ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠ, ತಮಿಳು, ಉರ್ದು ಮತ್ತು ಇಂಗ್ಲೀಷ್ ವಿಷಯಗಳ ಪರೀಕ್ಷೆ ನಡೆಯಲಿದೆ. ನಾಳೆ ಗಣಿತ ಮತ್ತು ಸಮಾಜ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದ್ದು, ನಕಲು ತಡೆಗೆ ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ಕೇಂದ್ರದ ಬಳಿಯಿರುವ  ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ  ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ, ತಾಲೂಕು  ಖಜಾನೆಯಿಂದ ಕೇಂದ್ರಗಳಿಗೆ ತಲುಪಿಸಲು ವಿತರಣಾ ಮಾರ್ಗಗಳನ್ನು ರಚಿಸಲಾಗಿದೆ. ನಿಯಮಾವಳಿ ರೀತಿ ವೇಳಾಪಟ್ಟಿಯಂತೆ ಸಕಾಲಕ್ಕೆ ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸುವ ವ್ಯವಸ್ಥೆ ಮಾಡಿ ಕೊಳ್ಳಲಾಗಿದೆ. ಈ ವರ್ಷವೂ ಕೊರೋನಾ ಬ್ಯಾಚ್ ಎಂದು ಪರಿಗಣಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ಇರುತ್ತದೆ ಎಂದು ರಾಜ್ಯ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್.ಎ.ಗೋಪಾಲ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

10 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

12 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

23 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

23 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago