Advertisement
MIRROR FOCUS

ಐ ಎ ಎಸ್‌ ಕನಸು ಹೊತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿನಿ | ಗುತ್ತಿಗಾರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ನಿಶ್ಮಿತಾ |

Share

ಕೊರೋನಾ ಸಮಯದಲ್ಲಿ ಶಾಲೆ ತೆರೆಯುತ್ತಿಲ್ಲ ಎನ್ನುವ ನೋವಿನ ನಡುವೆಯೂ ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ನೆಟ್ವರ್ಕ್‌ ಸಮಸ್ಯೆಗಳ ಮಧ್ಯೆಯೂ ಗ್ರಾಮೀಣ ಭಾಗದ ವಿದ್ಯಾರ್ಥಿನಿ ನಿಶ್ಮಿತಾ 623 ಅಂಕ ಪಡೆದಿದ್ದಾಳೆ. ಐ ಎ ಎಸ್‌ ಕನಸು ಹೊತ್ತಿರುವ ನಿಶ್ಮಿತಾ ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ.

Advertisement
Advertisement

 

 

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕುದ್ರಡ್ಕ ಬಳಿಯ ನಿಶ್ಮಿತಾ ಎಸ್‌ ಎಸ್‌ ಎಲ್‌ ಸಿ ಯಲ್ಲಿ  623  ಅಂಕ ಪಡೆದಿದ್ದಾಳೆ. ಗುತ್ತಿಗಾರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಈಕೆ ಕೊರೋನಾ ಸಂಕಷ್ಟದ ನಡುವೆ ಶಾಲೆ ಆರಂಭ ಆಗದೇ ಇರುವಾಗ ಸತತ ಪರಿಶ್ರಮ ಪಟ್ಟು ಓದಿದ್ದಾಳೆ. ಆನ್‌ ಲೈನ್‌ ತರಗತಿಗೆ ನೆಟ್ವರ್ಕ್‌ ಸಮಸ್ಯೆ ಇದ್ದರೂ ಓದಿನಲ್ಲಿ  ಹಿಂದೆ ಬೀಳಲಿಲ್ಲ. ಸರಕಾರ ನೀಡಿದ ಮಾರ್ಗಸೂಚಿಗಳನ್ನು  ಗಮನಿಸಿದಳು. ಚಂದನ ವಾಹಿನಿಯಲ್ಲಿ  ಬರುತ್ತಿದ್ದ ಪಾಠಗಳನ್ನು  ಕೇಳುತ್ತಿದ್ದಳು. ಯೂಟ್ಯೂಬ್‌ ಲಿಂಕ್‌ ಗಳು ಮೂಲಕ ಪಾಠ ಕೇಳಿದಳು. ಶಾಲೆಯ ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡಿದರು. ಹೀಗೇ ಯಶಸ್ಸಿಗಾಗಿ , ಗುರಿ ತಲುಪಲು ನಿರಂತರ ಓದಿದಳು.  ಹೀಗಾಗಿ ಅಂಕ ಪಡೆಯಲು ಸಾಧ್ಯವಾಗಿತ್ತು ಎನ್ನುತ್ತಾಳೆ ನಿಶ್ಮಿತಾ. ಮುಂದೆ ಐ ಎ ಎಸ್‌ ಮಾಡಬೇಕೆಂಬ ಕನಸು ಹೊತ್ತಿರುವ ನಿಶ್ಮಿತಾ ಈ ನಿಟ್ಟಿನಲ್ಲಿ  ಮುಂದಿನ ವಿದ್ಯಾಭ್ಯಾಸ ನಡೆಸುತ್ತೇನೆ ಎಂದು ಹೇಳುತ್ತಾಳೆ. ಗ್ರಾಮೀಣ ಭಾಗದಲ್ಲಿ ಬೆಳೆದಿರುವ ಕಾರಣ ಜನರ ಸಂಕಷ್ಟ ತಿಳಿಯುತ್ತದೆ , ಈ ಕಾರಣಕ್ಕೆ ಅಧಿಕಾರಿಯಾಗಿ ಜನರ ಸೇವೆ ಮಾಡಬೇಕೆಂಬ ಕನಸಿದೆ ಎನ್ನುತ್ತಾಳೆ. ಈಕೆಯ ತಂದೆ ಗಣಪ್ಪಯ್ಯ ನಾಯ್ಕ್‌ ಅವರು  ಕೃಷಿ ಹಾಗೂ ರಬ್ಬರ್‌ ಟ್ಯಾಪಿಂಗ್‌ ಕೆಲಸ ಮಾಡುತ್ತಾರೆ. ತಾಯಿ ರೇವತಿ ಗೃಹಿಣಿಯಾಗಿದ್ದಾರೆ. ಸಹೋದರ 9  ನೇ ತರಗತಿಯಲ್ಲಿ  ಓದುತ್ತಿದ್ದಾನೆ.

ಗ್ರಾ ಪಂ ಸದಸ್ಯರಿಂದ ಗೌರವ

 

ಸರಕಾರದ ಅಂದಿನ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳ ಪಾಠದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರು. ಗ್ರಾಮೀಣ ಭಾಗದಲ್ಲಿ ನೆಟ್ವರ್ಕ್‌ ಸಮಸ್ಯೆ ಇರುವ ಕಾರಣದಿಂದ ಚಂದನ ವಾಹಿನಿಯಲ್ಲಿ ಮಕ್ಕಳಿಗೆ ಎಸ್‌ ಎಸ್‌ ಎಲ್‌ ಸಿ ಪಾಠಗಳನ್ನು  ನೀಡಲಾಗುತ್ತಿತ್ತು. ಗ್ರಾಮೀಣ ಭಾಗಗಳಲ್ಲಿ  ಈ ಪಾಠ ಪ್ರಯೋಜನವಾಗಿದೆ ಎನ್ನುವುದು  ಇಂತಹ ವಿದ್ಯಾರ್ಥಿಗಳಿಂದ ಈಗ ಬೆಳಕಿಗೆ ಬಂದಿದೆ. 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

12 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

12 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago