ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಉಪನ್ಯಾಸಕ ಗುರುರಾಜ್ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಜಾಮೀನು ರದ್ದಾಗಿದ್ದರೂ ತಲೆಮರೆಸಿಕೊಂಡಿದ್ದರು. ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸುಮಾರು 5 ತಿಂಗಳ ಹಿಂದೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಒಂದೇ ದಿನದಲ್ಲಿ ಜಾಮೀನಿನಲ್ಲಿ ಉಪನ್ಯಾಸಕ ಗುರುರಾಜ್ ಜಾಮೀನಿನ ಮೇಲೆ ಹೊರಬಂದಿದ್ದರು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಲ್ಲಿ ಜ.25 ರಂದು ಜಾಮೀನು ರದ್ದಾಗಿ ಬಂಧನಕ್ಕೆ ವಾರಂಟ್ ಜಾರಿಯಾಗಿತ್ತು. ಅಂದಿನಿಂದ ತಲೆ ಮರೆಸಿಕೊಂಡು ಉಪನ್ಯಾಸಕ ಗುರುರಾಜ್ ಅವರು ಪೊಲೀಸರಿಗೂ ಸಿಕ್ಕಿರಲಿಲ್ಲ. ವಾರದಿಂದ ವಿದ್ಯಾರ್ಥಿನಿ ಪೋಷಕರು ಮತ್ತೆ ಅಲೆದಾಟ ನಡೆಸಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದರು. ಈ ಪ್ರಕರಣದಲ್ಲಿ ಇಲಾಖೆಗಳ ನಿರ್ಲಕ್ಷ್ಯದ ಬಗ್ಗೆಯೂ ಸಾರ್ವಜನಿಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೆಲ್ಲದರ ಬೆನ್ನಲ್ಲೇ ಉಪನ್ಯಾಸಕ ಗುರುರಾಜ್ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆರೋಪಿ ಉಪನ್ಯಾಸಕನಿಗೆ ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತವು ಕೂಡಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪನ್ಯಾಸಕ ಗುರುರಾಜ್ ಅವರನ್ನು ಈಗಾಗಲೇ ಕೆಲಸದಿಂದ ವಜಾ ಮಾಡಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…