ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಉಪನ್ಯಾಸಕ ಗುರುರಾಜ್ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಜಾಮೀನು ರದ್ದಾಗಿದ್ದರೂ ತಲೆಮರೆಸಿಕೊಂಡಿದ್ದರು. ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸುಮಾರು 5 ತಿಂಗಳ ಹಿಂದೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಒಂದೇ ದಿನದಲ್ಲಿ ಜಾಮೀನಿನಲ್ಲಿ ಉಪನ್ಯಾಸಕ ಗುರುರಾಜ್ ಜಾಮೀನಿನ ಮೇಲೆ ಹೊರಬಂದಿದ್ದರು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಲ್ಲಿ ಜ.25 ರಂದು ಜಾಮೀನು ರದ್ದಾಗಿ ಬಂಧನಕ್ಕೆ ವಾರಂಟ್ ಜಾರಿಯಾಗಿತ್ತು. ಅಂದಿನಿಂದ ತಲೆ ಮರೆಸಿಕೊಂಡು ಉಪನ್ಯಾಸಕ ಗುರುರಾಜ್ ಅವರು ಪೊಲೀಸರಿಗೂ ಸಿಕ್ಕಿರಲಿಲ್ಲ. ವಾರದಿಂದ ವಿದ್ಯಾರ್ಥಿನಿ ಪೋಷಕರು ಮತ್ತೆ ಅಲೆದಾಟ ನಡೆಸಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದರು. ಈ ಪ್ರಕರಣದಲ್ಲಿ ಇಲಾಖೆಗಳ ನಿರ್ಲಕ್ಷ್ಯದ ಬಗ್ಗೆಯೂ ಸಾರ್ವಜನಿಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೆಲ್ಲದರ ಬೆನ್ನಲ್ಲೇ ಉಪನ್ಯಾಸಕ ಗುರುರಾಜ್ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆರೋಪಿ ಉಪನ್ಯಾಸಕನಿಗೆ ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತವು ಕೂಡಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪನ್ಯಾಸಕ ಗುರುರಾಜ್ ಅವರನ್ನು ಈಗಾಗಲೇ ಕೆಲಸದಿಂದ ವಜಾ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…