ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಉಪನ್ಯಾಸಕ ಗುರುರಾಜ್ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಜಾಮೀನು ರದ್ದಾಗಿದ್ದರೂ ತಲೆಮರೆಸಿಕೊಂಡಿದ್ದರು. ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸುಮಾರು 5 ತಿಂಗಳ ಹಿಂದೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಒಂದೇ ದಿನದಲ್ಲಿ ಜಾಮೀನಿನಲ್ಲಿ ಉಪನ್ಯಾಸಕ ಗುರುರಾಜ್ ಜಾಮೀನಿನ ಮೇಲೆ ಹೊರಬಂದಿದ್ದರು. ಇದನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ನಲ್ಲಿ ಜ.25 ರಂದು ಜಾಮೀನು ರದ್ದಾಗಿ ಬಂಧನಕ್ಕೆ ವಾರಂಟ್ ಜಾರಿಯಾಗಿತ್ತು. ಅಂದಿನಿಂದ ತಲೆ ಮರೆಸಿಕೊಂಡು ಉಪನ್ಯಾಸಕ ಗುರುರಾಜ್ ಅವರು ಪೊಲೀಸರಿಗೂ ಸಿಕ್ಕಿರಲಿಲ್ಲ. ವಾರದಿಂದ ವಿದ್ಯಾರ್ಥಿನಿ ಪೋಷಕರು ಮತ್ತೆ ಅಲೆದಾಟ ನಡೆಸಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದರು. ಈ ಪ್ರಕರಣದಲ್ಲಿ ಇಲಾಖೆಗಳ ನಿರ್ಲಕ್ಷ್ಯದ ಬಗ್ಗೆಯೂ ಸಾರ್ವಜನಿಕರೂ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೆಲ್ಲದರ ಬೆನ್ನಲ್ಲೇ ಉಪನ್ಯಾಸಕ ಗುರುರಾಜ್ ಸೋಮವಾರ ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆರೋಪಿ ಉಪನ್ಯಾಸಕನಿಗೆ ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತವು ಕೂಡಾ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪನ್ಯಾಸಕ ಗುರುರಾಜ್ ಅವರನ್ನು ಈಗಾಗಲೇ ಕೆಲಸದಿಂದ ವಜಾ ಮಾಡಿದೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…