ಕೃಷಿಗೆ ಕಾಡಾನೆ ಹಾವಳಿ, ಚಿರತೆ ದಾಳಿ | ಕಾರ್ಯಪಡೆಗಳಿಗೆ ಸಿಬಂದಿಗಳ ನಿಯೋಜನೆ

October 7, 2025
6:25 AM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆಗೆ 48 ಸಿಬ್ಬಂದಿಯನ್ನು ನಿಯೋಜನೆ ಮಾಡಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ.

Advertisement

ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಸಿಬ್ಬಂದಿ ಇರಲಿದ್ದಾರೆ.  ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈ ನಡುವೆ, ತುಮಕೂರು ಜಿಲ್ಲೆಯ ವಿವಿಧೆಡೆ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಒಪ್ಪಿಗೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಾರ್ಮಾಡಿ ಘಾಟ್ ಅರಣ್ಯದಲ್ಲಿ ಕಾಡ್ಗಿಚ್ಚು- 2 ಕಿಮೀ ಪ್ರದೇಶಕ್ಕೆ ಬೆಂಕಿ ವ್ಯಾಪ್ತಿ
January 20, 2026
7:54 AM
by: ದ ರೂರಲ್ ಮಿರರ್.ಕಾಂ
ನಂಜನಗೂಡು ರಸಬಾಳೆ ಸೇರಿ ಜಿಐ ಉತ್ಪನ್ನಗಳು ಮೊದಲ ಬಾರಿ ಮಾಲ್ಡೀವ್ಸ್‌ಗೆ
January 20, 2026
7:49 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದ ಸಮತೋಲನಕ್ಕೆ ಸಿರಿಧಾನ್ಯಗಳೇ ಮದ್ದು
January 20, 2026
7:44 AM
by: ಮಿರರ್‌ ಡೆಸ್ಕ್
ಅಡಿಕೆ ಬಳಕೆ ನಿಯಂತ್ರಣದ ಚರ್ಚೆ, ರೈತರ ಭವಿಷ್ಯದ ಎಚ್ಚರಿಕೆ? | ಆರೋಗ್ಯದ ಹೆಸರಿನಲ್ಲಿ ಕೃಷಿಗೆ ಮೌನ ಒತ್ತಡ?
January 20, 2026
7:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror