ಕೃಷಿಗೆ ಕಾಡಾನೆ ಹಾವಳಿ, ಚಿರತೆ ದಾಳಿ | ಕಾರ್ಯಪಡೆಗಳಿಗೆ ಸಿಬಂದಿಗಳ ನಿಯೋಜನೆ

October 7, 2025
6:25 AM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆಗೆ 48 ಸಿಬ್ಬಂದಿಯನ್ನು ನಿಯೋಜನೆ ಮಾಡಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ.

ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಸಿಬ್ಬಂದಿ ಇರಲಿದ್ದಾರೆ.  ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈ ನಡುವೆ, ತುಮಕೂರು ಜಿಲ್ಲೆಯ ವಿವಿಧೆಡೆ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಒಪ್ಪಿಗೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror