ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆಗೆ 48 ಸಿಬ್ಬಂದಿಯನ್ನು ನಿಯೋಜನೆ ಮಾಡಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ.
ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಸಿಬ್ಬಂದಿ ಇರಲಿದ್ದಾರೆ. ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಈ ನಡುವೆ, ತುಮಕೂರು ಜಿಲ್ಲೆಯ ವಿವಿಧೆಡೆ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯ 40 ಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಒಪ್ಪಿಗೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…