ಬಟ್ಟೆ ಗಲೀಜಾಗಿದೆ ಎಂದು ಮೆಟ್ರೋದ ಒಳಗೆ ಬಿಡದ ಸಿಬ್ಬಂದಿ | ರೈತನನ್ನು ಅವಮಾನಿಸಿದ್ದಕ್ಕೆ ಸಹಪ್ರಯಾಣಿಕರ ಆಕ್ರೋಶ | ಮೆಟ್ರೋ ಸಿಬ್ಬಂದಿ ವಜಾ

February 26, 2024
12:24 PM
ಬಟ್ಟೆ ಗಲೀಜಾಗಿದೆ ಎಂದು ರೈತನನ್ನು ಮೆಟ್ರೋದಲ್ಲಿ ಪ್ರಯಾಣಕ್ಕೆ ಅನುಮತಿ ನೀಡಲಿಲ್ಲ. ಇದೀಗ ಈ ವಿಡಿಯೋ ವೈರಲ್‌ ಆಗಿದೆ. ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ರೈತ(Farmer) ಬೆಳೆದ ಅನ್ನವನ್ನು ತಿಂದು ಕೊಬ್ಬಿರುವ ಕೆಲ ಅಧಿಕಾರಿಗಳು(Officer) ಅವರ ದುರಹಂಕಾರ, ದರ್ಪವನ್ನು ರೈತರ ಮೇಲೆಯೇ ತೋರುತ್ತಿರುವುದು ಅಸಹನೀಯ. ರೈತ ಮಣ್ಣಿನೊಂದಿಗೆ ಬದುಕುವವನು. ಅವನ ಮೈ, ಬಟ್ಟೆ ಕೊಳೆಯಾದರೇನೇ ನಾವೆಲ್ಲಾ ಅನ್ನ ತಿನ್ನಬಹುದು. ಬಟ್ಟೆ ಮಣ್ಣಾಗಿದೆ, ಮೈ ಕೊಳೆಯಾಗಿದೆ ಎಂದು ರೈತನನ್ನು ಮೆಟ್ರೋ (Namma Metro) ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಎಂಆರ್‌ಸಿಎಲ್‌ (BMRCL) ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ (Namma Metro) ಸಿಬ್ಬಂದಿಯನ್ನುಈಗ  ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.

Advertisement

ವೀಡಿಯೋವನ್ನು ಜನ ಬಿಎಂಆರ್‌ಸಿಎಲ್‌ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಟಿಪ್ ಟಾಪ್ ಆಗಿ ರೆಡಿಯಾಗಿ ಬಂದರೆ ಮಾತ್ರ ಮೇಟ್ರೋದೊಳಗೆ ಎಂಟ್ರಿ, ಇಲ್ಲವಾದರೆ ಎಂಟ್ರಿ ಇಲ್ಲವೇ? ವಿಐಪಿಗಳಿಗೆ ಮಾತ್ರ ಮೆಟ್ರೋ ಸೌಲಭ್ಯವೇ ಎಂದು ಪ್ರಶ್ನಿಸಿದ್ದಾರೆ. ಅತಿರೇಕದ ವರ್ತನೆ ತೋರಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಘಟನೆ ತಡವಾಗಿ ಬೆಳಕಿಗೆ ಬಂತು. ಇದು ಯಾವುದೇ ಕಾರಣಕ್ಕೂ ಕ್ಷಮಿಸುವಂತದ್ದಲ್ಲ. ಕೂಡಲೇ ಘಟನೆಗೆ ಕಾರಣರಾದವರನ್ನ ಟರ್ಮಿನೇಟ್ ಮಾಡಲಾಗಿದೆ. ಘಟನೆಯನ್ನ ಬಿಎಂಆರ್‍ಸಿಎಲ್ ಖಂಡಿಸುತ್ತಿದೆ ಎಂದು ಬಿಎಂಆರ್ ಸಿಎಲ್ ಪಿಆರ್ ಒ ಯಶವಂತ ಚೌಹಾಣ್ ಖಾಸಗಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Namma Metro is an inclusive public transport. The Rajajinagar incident is probed & the services of the security supervisor is terminated. BMRCL regrets the inconvenience caused to the Passenger.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror