ರೈತ(Farmer) ಬೆಳೆದ ಅನ್ನವನ್ನು ತಿಂದು ಕೊಬ್ಬಿರುವ ಕೆಲ ಅಧಿಕಾರಿಗಳು(Officer) ಅವರ ದುರಹಂಕಾರ, ದರ್ಪವನ್ನು ರೈತರ ಮೇಲೆಯೇ ತೋರುತ್ತಿರುವುದು ಅಸಹನೀಯ. ರೈತ ಮಣ್ಣಿನೊಂದಿಗೆ ಬದುಕುವವನು. ಅವನ ಮೈ, ಬಟ್ಟೆ ಕೊಳೆಯಾದರೇನೇ ನಾವೆಲ್ಲಾ ಅನ್ನ ತಿನ್ನಬಹುದು. ಬಟ್ಟೆ ಮಣ್ಣಾಗಿದೆ, ಮೈ ಕೊಳೆಯಾಗಿದೆ ಎಂದು ರೈತನನ್ನು ಮೆಟ್ರೋ (Namma Metro) ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಎಂಆರ್ಸಿಎಲ್ (BMRCL) ಸಿಬ್ಬಂದಿಯ ಅತಿರೇಕದ ವರ್ತನೆಯ ವೀಡಿಯೋ ಪ್ರಯಾಣಿಕರ ಮೊಬೈಲ್ನಲ್ಲಿ ಸೆರೆಯಾಗಿದೆ. ಬಳಿಕ ಸಹಪ್ರಯಾಣಿಕರು ಸಿಬ್ಬಂದಿ ಬಗ್ಗೆ ತಲೆಕೆಡಿಸಿಕೊಳ್ಳದೆ, ವ್ಯಕ್ತಿಯನ್ನು ಮೆಟ್ರೋದಲ್ಲಿ ಕರೆದೊಯ್ದಿದ್ದಾರೆ. ಅಲ್ಲದೇ ಮೆಟ್ರೋ ಸಿಬ್ಬಂದಿ ವಿರುದ್ಧ ಸಹಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ (Namma Metro) ಸಿಬ್ಬಂದಿಯನ್ನುಈಗ ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.
ವೀಡಿಯೋವನ್ನು ಜನ ಬಿಎಂಆರ್ಸಿಎಲ್ ಟ್ಯಾಗ್ ಮಾಡಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಟಿಪ್ ಟಾಪ್ ಆಗಿ ರೆಡಿಯಾಗಿ ಬಂದರೆ ಮಾತ್ರ ಮೇಟ್ರೋದೊಳಗೆ ಎಂಟ್ರಿ, ಇಲ್ಲವಾದರೆ ಎಂಟ್ರಿ ಇಲ್ಲವೇ? ವಿಐಪಿಗಳಿಗೆ ಮಾತ್ರ ಮೆಟ್ರೋ ಸೌಲಭ್ಯವೇ ಎಂದು ಪ್ರಶ್ನಿಸಿದ್ದಾರೆ. ಅತಿರೇಕದ ವರ್ತನೆ ತೋರಿದ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಈ ಘಟನೆ ತಡವಾಗಿ ಬೆಳಕಿಗೆ ಬಂತು. ಇದು ಯಾವುದೇ ಕಾರಣಕ್ಕೂ ಕ್ಷಮಿಸುವಂತದ್ದಲ್ಲ. ಕೂಡಲೇ ಘಟನೆಗೆ ಕಾರಣರಾದವರನ್ನ ಟರ್ಮಿನೇಟ್ ಮಾಡಲಾಗಿದೆ. ಘಟನೆಯನ್ನ ಬಿಎಂಆರ್ಸಿಎಲ್ ಖಂಡಿಸುತ್ತಿದೆ ಎಂದು ಬಿಎಂಆರ್ ಸಿಎಲ್ ಪಿಆರ್ ಒ ಯಶವಂತ ಚೌಹಾಣ್ ಖಾಸಗಿ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
Namma Metro is an inclusive public transport. The Rajajinagar incident is probed & the services of the security supervisor is terminated. BMRCL regrets the inconvenience caused to the Passenger.
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…